AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cow Hug Day: ಫೆ.14ರಂದು ‘ಹಸುವನ್ನು ತಬ್ಬುವ ದಿನ’ ಆಚರಣೆಗೆ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ

Animal Welfare Board ಪ್ರಾಣಿ ಕಲ್ಯಾಣ ಮಂಡಳಿ ಫೆ.14ರಂದು ಹಸುವನ್ನು ತಬ್ಬುವ ದಿನ ಆಚರಿಸಿ ಎಂದು ಜನರಿಗೆ ಕರೆ ನೀಡಿದ್ದು, ಈ ಕರೆಯನ್ನು ಇದೀಗ ಹಿಂಪಡೆದಿದೆ

Cow Hug Day: ಫೆ.14ರಂದು 'ಹಸುವನ್ನು ತಬ್ಬುವ ದಿನ' ಆಚರಣೆಗೆ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ
ದನ ಆಲಂಗಿಸುವ ದಿನ
ರಶ್ಮಿ ಕಲ್ಲಕಟ್ಟ
|

Updated on:Feb 10, 2023 | 5:46 PM

Share

ಫೆ.14,ಪ್ರೇಮಿಗಳ ದಿನದಂದು (Valentine’s day)ಜನರು ಹಸುವನ್ನು ತಬ್ಬಿಕೊಳ್ಳಬೇಕು(cow hug day) ಎಂಬ ಸರ್ಕಾರಿ ಸಂಸ್ಥೆಯ ಮನವಿ ಮಾಡಿತ್ತು.ಈ ಬಗ್ಗೆ ಟೀಕೆ ಆಕ್ಷೇಪ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದ್ದು ಇದೀಗ ಈ ಕರೆಯನ್ನು ಹಿಂಪಡೆಯಲಾಗಿದೆ. ಪ್ರಾಣಿ ಕಲ್ಯಾಣ ಮಂಡಳಿಯು (Animal Welfare Board of India) ಪ್ರೇಮಿಗಳ ದಿನದಂದು ಹಸುವನ್ನು ತಬ್ಬಿಕೊಳ್ಳಬೇಕು ಎಂದು ಜನರಿಗೆ ಕರೆ ನೀಡಿತ್ತು. ಹೀಗೆ ಹಸುಗಳನ್ನು ತಬ್ಬಿಕೊಳ್ಳುವುದರಿಂದ ಇದು “ಭಾವನಾತ್ಮಕ ಶ್ರೀಮಂತಿಕೆ” ತರುತ್ತದೆ ಮತ್ತು “ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು” ಹೆಚ್ಚಿಸುತ್ತದೆ ಎಂದು ಹೇಳಿತ್ತು.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ, 2022 ರ ಫೆಬ್ರವರಿ 14 ರಂದು ಹಸುವನ್ನು ತಬ್ಬಿಕೊಳ್ಳುವ ದಿನ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹೊರಡಿಸಿದ ಮನವಿಯನ್ನು ಹಿಂಪಡೆಯಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ಎಸ್‌ಕೆ ದತ್ತಾ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಮೊದಲ ಬಾರಿಗೆ AWBI ದೇಶದ ಗೋ ಪ್ರೇಮಿಗಳಿಗೆ ‘ಕೌ ಹಗ್ ಡೇ’ ಆಚರಿಸುವಂತೆ ಮನವಿ ಮಾಡಿತ್ತು.

ಇದನ್ನೂ ಓದಿ: ಸಂಸತ್​​ನಲ್ಲಿ ಪ್ರಧಾನಿ ಮೋದಿ ಮಾಡಿದ್ದು ಸಾಮಾನ್ಯ ಭಾಷಣ, ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕೌ ಹಗ್ ಡೇ ಬಗ್ಗೆ  ವಿಪಕ್ಷ ಟೀಕೆ

ಶಿವಸೇನಾ (ಯುಬಿಟಿ) ಶುಕ್ರವಾರ ‘ಕೌ ಹಗ್ ಡೇ’ ಉಪಕ್ರಮವನ್ನು ಲೇವಡಿ ಮಾಡಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿತು. ಅವರು ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಪ್ರಧಾನಿಗೆ “ಪವಿತ್ರ ಹಸು” ಎಂದು ಹೇಳಿದ್ದಾರೆ.

ಬಂಗಾಳದ ರಾಜ್ಯಸಭಾ ಸದಸ್ಯ ಟಿಎಂಸಿಯ ಸಂತುನು ಸೇನ್, ಮುಖ್ಯವಾಹಿನಿಯ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಹಸುವಿನ ಅಪ್ಪುಗೆಯ ದಿನವು ಹುಸಿ-ಹಿಂದೂತ್ವ ಮತ್ತು ಹುಸಿ-ದೇಶಭಕ್ತಿ ಎಂದು ಹೇಳಿದರು.

ಏತನ್ಮಧ್ಯೆ, ಸಿಪಿಐ(ಎಂ) ಎಳಮರಮ್ ಕರೀಂ ಹಸು ತಬ್ಬುವ ದಿನವನ್ನು “ಹಾಸ್ಯಾಸ್ಪದ” ಪರಿಕಲ್ಪನೆ ಮತ್ತು ದೇಶಕ್ಕೆ ಅವಮಾನ ಎಂದು ಕರೆದರು.

“ನಾನು ರೈತ ಸಮುದಾಯದಿಂದ ಬಂದವನು, ನಾನು ಪ್ರತಿ ದಿನ ನನ್ನ ಹಸುವನ್ನು ಅಪ್ಪಿಕೊಳ್ಳುತ್ತೇನೆ, ಕೇವಲ ಒಂದು ದಿನವಲ್ಲ, ಮತ್ತು ಇದು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಮಾತ್ರ” ಎಂದು ಕಾಂಗ್ರೆಸ್‌ನ ರಜನಿ ಪಾಟೀಲ್ ಹೇಳಿದ್ದಾರೆ. ಇದೇ ಭಾವನೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಕೂಡಾ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Fri, 10 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ