AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ […]

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 5:52 PM

Share

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ ನನ್ನ ಗಮನಕ್ಕೆ ಬಂದಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಜ್ಞಾನವನ್ನು ಒದಗಿಸುತ್ತದೆ ಮತ್ತು ಭಾರತದ ಆರ್ಥಿಕತೆಗೂ ನೆರವಾಗಲಿದೆ,‘‘ ಎಂದರು.

ವಿದ್ಯಾರ್ಥಿಗಳಿಗೆ ಹಲವಾರು ಆಯಾಮಗಳಲ್ಲಿ ಶಿಕ್ಷಣ ಒದಗಿಸುತ್ತಿರುವ ಜೆಎನ್​ಯು ಶ್ರಮವನ್ನು ರಾಷ್ಟ್ರಪತಿಗಳು ಈ ಸಂದರ್ಭದಲ್ಲಿ ಕೊಂಡಾಡಿದರು.

‘‘ಸಾಮಾಜಿಕ ವಿಜ್ಞಾನ ಮೊದಲುಗೊಂಡು ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಆಯಾಮಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳಲು ಜೆಎನ್​ಯುಗೆ ನೆರವಾಗಿರುವ ಪ್ರತಿ ಸದಸ್ಯನ ಕೊಡುಗೆಯನ್ನು ನಾನು ತುಂಬು ಹೃದಯದಿಂದ ಶ್ಲಾಘಿಸುತ್ತೇನೆ. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಇಲ್ಲಿನ ಬೋಧನೆ ಮತ್ತು ಸಂಶೋಧನೆ ಒಂದು ದೊಡ್ಡ ಪ್ರಭಾವನ್ನುಂಟು ಮಾಡಿದೆ, ಎನ್ನುವುದು ಉತ್ಪ್ರೇಕ್ಷೆಯಲ್ಲ,’‘ ಎಂದು ರಾಷ್ಟ್ರಪತಿಗಳು ಹೇಳಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!