AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ […]

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 18, 2020 | 5:52 PM

Share

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ ನನ್ನ ಗಮನಕ್ಕೆ ಬಂದಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಜ್ಞಾನವನ್ನು ಒದಗಿಸುತ್ತದೆ ಮತ್ತು ಭಾರತದ ಆರ್ಥಿಕತೆಗೂ ನೆರವಾಗಲಿದೆ,‘‘ ಎಂದರು.

ವಿದ್ಯಾರ್ಥಿಗಳಿಗೆ ಹಲವಾರು ಆಯಾಮಗಳಲ್ಲಿ ಶಿಕ್ಷಣ ಒದಗಿಸುತ್ತಿರುವ ಜೆಎನ್​ಯು ಶ್ರಮವನ್ನು ರಾಷ್ಟ್ರಪತಿಗಳು ಈ ಸಂದರ್ಭದಲ್ಲಿ ಕೊಂಡಾಡಿದರು.

‘‘ಸಾಮಾಜಿಕ ವಿಜ್ಞಾನ ಮೊದಲುಗೊಂಡು ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಆಯಾಮಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳಲು ಜೆಎನ್​ಯುಗೆ ನೆರವಾಗಿರುವ ಪ್ರತಿ ಸದಸ್ಯನ ಕೊಡುಗೆಯನ್ನು ನಾನು ತುಂಬು ಹೃದಯದಿಂದ ಶ್ಲಾಘಿಸುತ್ತೇನೆ. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಇಲ್ಲಿನ ಬೋಧನೆ ಮತ್ತು ಸಂಶೋಧನೆ ಒಂದು ದೊಡ್ಡ ಪ್ರಭಾವನ್ನುಂಟು ಮಾಡಿದೆ, ಎನ್ನುವುದು ಉತ್ಪ್ರೇಕ್ಷೆಯಲ್ಲ,’‘ ಎಂದು ರಾಷ್ಟ್ರಪತಿಗಳು ಹೇಳಿದರು.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?