AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ […]

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 5:52 PM

Share

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ ನನ್ನ ಗಮನಕ್ಕೆ ಬಂದಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಜ್ಞಾನವನ್ನು ಒದಗಿಸುತ್ತದೆ ಮತ್ತು ಭಾರತದ ಆರ್ಥಿಕತೆಗೂ ನೆರವಾಗಲಿದೆ,‘‘ ಎಂದರು.

ವಿದ್ಯಾರ್ಥಿಗಳಿಗೆ ಹಲವಾರು ಆಯಾಮಗಳಲ್ಲಿ ಶಿಕ್ಷಣ ಒದಗಿಸುತ್ತಿರುವ ಜೆಎನ್​ಯು ಶ್ರಮವನ್ನು ರಾಷ್ಟ್ರಪತಿಗಳು ಈ ಸಂದರ್ಭದಲ್ಲಿ ಕೊಂಡಾಡಿದರು.

‘‘ಸಾಮಾಜಿಕ ವಿಜ್ಞಾನ ಮೊದಲುಗೊಂಡು ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಆಯಾಮಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳಲು ಜೆಎನ್​ಯುಗೆ ನೆರವಾಗಿರುವ ಪ್ರತಿ ಸದಸ್ಯನ ಕೊಡುಗೆಯನ್ನು ನಾನು ತುಂಬು ಹೃದಯದಿಂದ ಶ್ಲಾಘಿಸುತ್ತೇನೆ. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಇಲ್ಲಿನ ಬೋಧನೆ ಮತ್ತು ಸಂಶೋಧನೆ ಒಂದು ದೊಡ್ಡ ಪ್ರಭಾವನ್ನುಂಟು ಮಾಡಿದೆ, ಎನ್ನುವುದು ಉತ್ಪ್ರೇಕ್ಷೆಯಲ್ಲ,’‘ ಎಂದು ರಾಷ್ಟ್ರಪತಿಗಳು ಹೇಳಿದರು.

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ