ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ […]

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President
ಅರುಣ್​ ಕುಮಾರ್​ ಬೆಳ್ಳಿ

Updated on: Nov 18, 2020 | 5:52 PM

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ ನನ್ನ ಗಮನಕ್ಕೆ ಬಂದಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಜ್ಞಾನವನ್ನು ಒದಗಿಸುತ್ತದೆ ಮತ್ತು ಭಾರತದ ಆರ್ಥಿಕತೆಗೂ ನೆರವಾಗಲಿದೆ,‘‘ ಎಂದರು.

ವಿದ್ಯಾರ್ಥಿಗಳಿಗೆ ಹಲವಾರು ಆಯಾಮಗಳಲ್ಲಿ ಶಿಕ್ಷಣ ಒದಗಿಸುತ್ತಿರುವ ಜೆಎನ್​ಯು ಶ್ರಮವನ್ನು ರಾಷ್ಟ್ರಪತಿಗಳು ಈ ಸಂದರ್ಭದಲ್ಲಿ ಕೊಂಡಾಡಿದರು.

‘‘ಸಾಮಾಜಿಕ ವಿಜ್ಞಾನ ಮೊದಲುಗೊಂಡು ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಆಯಾಮಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳಲು ಜೆಎನ್​ಯುಗೆ ನೆರವಾಗಿರುವ ಪ್ರತಿ ಸದಸ್ಯನ ಕೊಡುಗೆಯನ್ನು ನಾನು ತುಂಬು ಹೃದಯದಿಂದ ಶ್ಲಾಘಿಸುತ್ತೇನೆ. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಇಲ್ಲಿನ ಬೋಧನೆ ಮತ್ತು ಸಂಶೋಧನೆ ಒಂದು ದೊಡ್ಡ ಪ್ರಭಾವನ್ನುಂಟು ಮಾಡಿದೆ, ಎನ್ನುವುದು ಉತ್ಪ್ರೇಕ್ಷೆಯಲ್ಲ,’‘ ಎಂದು ರಾಷ್ಟ್ರಪತಿಗಳು ಹೇಳಿದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us