AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಂಗಳವಾರ ಜ್ಞಾನವಾಪಿ ಮಸೀದಿಯ ವರದಿಯನ್ನು ಸಲ್ಲಿಸಲು ಹೆಚ್ಚುವರಿ 21 ದಿನಗಳ ಕಾಲಾವಕಾಶ ಕೋರಿದೆ. ASI ಆರಂಭಿಕ ಗಡುವು ಆದ ನವೆಂಬರ್ 17 ರ ಗಡುವನ್ನು ತಪ್ಪಿಸಿದ ನಂತರ 15 ದಿನಗಳ ವಿಸ್ತರಣೆಯನ್ನು ಕೋರಿತ್ತು. ಆ ಸಮಯದಲ್ಲಿ ನ್ಯಾಯಾಲಯವು 10 ದಿನಗಳ ವಿಸ್ತರಣೆಗೆ ಅನುಮತಿ ನೀಡಿತ್ತು. ಹಾಗಾಗಿ ನವೆಂಬರ್ 28 ಅದರ ಹೊಸ ಗಡುವು ಆಗಿತ್ತು.

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ
ರಶ್ಮಿ ಕಲ್ಲಕಟ್ಟ
|

Updated on: Nov 28, 2023 | 2:47 PM

Share

ದೆಹಲಿ ನವೆಂಬರ್ 28: ಜ್ಞಾನವಾಪಿ ಮಸೀದಿಯ ಆವರಣದಲ್ಲಿ (Gyanvapi Mosque survey) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಹೆಚ್ಚುವರಿ ಮೂರು ವಾರಗಳ ಕಾಲಾವಕಾಶ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯಕ್ಕೆ ಇಂದು (ಮಂಗಳವಾರ) ಅರ್ಜಿ ಸಲ್ಲಿಸಿದೆ. ಸಮಗ್ರ ವರದಿಯನ್ನು ಹೊಂದಿಸಲು ಮತ್ತು ಅಂತಿಮಗೊಳಿಸಲು ಹೆಚ್ಚಿನ ಸಮಯವನ್ನು ಕೋರಿ ಎಎಸ್‌ಐ ಅನ್ನು ಪ್ರತಿನಿಧಿಸುವ ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಎಎಸ್‌ಐ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ.

100 ದಿನಗಳ ಅವಧಿಯ ವ್ಯಾಪಕ ಸಮೀಕ್ಷೆಯು ಸುಮಾರು ಒಂದು ತಿಂಗಳ ಹಿಂದೆ ಮುಕ್ತಾಯಗೊಂಡಿದೆ. ಆದಾಗ್ಯೂ, ಎಎಸ್ಐಈ ಅವಧಿಯಲ್ಲಿ ಹಲವಾರು ವಿಸ್ತರಣೆಗಳನ್ನು ಕೋರಿದ್ದು, ವರದಿಯನ್ನು ಸಿದ್ಧಪಡಿಸುವಲ್ಲಿ ಅಗತ್ಯವಿರುವ ಸಂಕೀರ್ಣತೆಯನ್ನು ಉಲ್ಲೇಖಿಸಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಈ ಹಿಂದೆ ನವೆಂಬರ್ 18 ರಂದು ಜ್ಞಾನವಾಪಿ ಮಸೀದಿ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಎಎಸ್‌ಐಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನಂತರ ಇತ್ತೀಚಿನ ವಿಸ್ತರಣೆ ವಿನಂತಿಯು ಬಂದಿದೆ. ವೈಜ್ಞಾನಿಕ ಸಮೀಕ್ಷಾ ವರದಿ ಸಲ್ಲಿಕೆಗೆ ವಿಸ್ತೃತ ಗಡುವು ಇಂದಿಗೆ ಮುಕ್ತಾಯವಾಗಲಿದೆ.

ದೇವಾಲಯದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿದ ಅರ್ಜಿಯ ನಂತರ ಜುಲೈ 21 ರಂದು ವಾರಣಾಸಿ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಿಂದ ಸೀಲ್ ಆಗಿರುವ ವುಜುಖಾನಾ ಪ್ರದೇಶವನ್ನು ಸಮೀಕ್ಷೆಯಿಂದ ಹೊರಗಿಡಲಾಗಿದೆ.

ಆ ಆದೇಶಕ್ಕೆ ಅನುಸಾರವಾಗಿ, ಎಎಸ್‌ಐ ಜುಲೈ 24 ರಂದು ನಾಲ್ಕೂವರೆ ಗಂಟೆಗಳ ಕಾಲ ಸಮೀಕ್ಷೆಯನ್ನು ನಡೆಸಿತು. ಆನಂತರ ಸುಪ್ರೀಂಕೋರ್ಟ್ ಅದೇ ದಿನ ಜುಲೈ 26 ರಂದು ಸಂಜೆ 5 ಗಂಟೆಯವರೆಗೆ ಪ್ರಕ್ರಿಯೆ ಸ್ಥಗಿತಗೊಳಿಸಿತು. ಆಮೇಲೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಗೆ (AIMC) ಅಲಹಾಬಾದ್ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯೂ ಅಲ್ಲ ಹಿಂದೂ ದೇವಾಲಯವೂ ಅಲ್ಲ, ಅದು ಬೌದ್ಧ ಮಠ: ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್

ಜುಲೈ 25 ರಂದು ಮಸೀದಿ ಸಮಿತಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದಾಗ, ಅದು ಸಮೀಕ್ಷೆಗೆ ತಡೆಯಾಜ್ಞೆಯನ್ನು ವಿಸ್ತರಿಸಿತು. ಆಗಸ್ಟ್ 3 ರಂದು ಹೈಕೋರ್ಟ್ ತನ್ನ ತೀರ್ಪನ್ನು ನೀಡಿ, ಸಮೀಕ್ಷೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಿತು. ಹೈಕೋರ್ಟ್ ಆದೇಶದ ವಿರುದ್ಧ ಎಐಎಂಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ಆಗಸ್ಟ್ 4 ರಂದು ಸಮೀಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿತು.

ಆಗಸ್ಟ್ 3 ರಂದು ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿದ ನಂತರ ಮತ್ತು ಸಮೀಕ್ಷೆಗೆ ಚಾಲನೆ ನೀಡಿದ ನಂತರ ಆಗಸ್ಟ್ 4 ರಂದು ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಪುನರಾರಂಭವಾಯಿತು. ವಾರಣಾಸಿ ನ್ಯಾಯಾಲಯವು ಆರಂಭದಲ್ಲಿ ಜುಲೈ 21 ರಂದು ಸಮೀಕ್ಷೆಗೆ ಆದೇಶಿಸಿದ್ದು ಆಗಸ್ಟ್ 4 ರೊಳಗೆ ವರದಿಯನ್ನು ಸಲ್ಲಿಸುವಂತೆ ಕೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ