AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು...

ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ
ಕೆಸಿಆರ್ ದೇವಸ್ಥಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 17, 2022 | 5:43 PM

Share

ಭಾರತ್ ರಾಷ್ಟ್ರ ಸಮಿತಿ (Bharat Rashtra Samithi)ಮುಖ್ಯಸ್ಥ, ತೆಲಂಗಾಣ ಮುಖ್ಯಮಂತ್ರಿ  ಕೆ ಚಂದ್ರಶೇಖರ ರಾವ್  (K Chandrashekar Rao) ಅವರು ಪ್ರಧಾನಿ ಆಗಬೇಕೆಂದು ಹಾರೈಸಿ ಅವರ ಕಟ್ಟಾ ಅಭಿಮಾನಿಯೊಬ್ಬರು ದೇವಾಲಯವನ್ನು ನಿರ್ಮಿಸಿದ್ದಾರೆ. ಆ ದೇವಸ್ಥಾನದಲ್ಲಿ ಕೆಸಿಆರ್ ವಿಗ್ರಹವನ್ನೂ ಸ್ಥಾಪಿಸಲಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಿಡಮನೂರ್ ಗ್ರಾಮದ ಗೋಗುಲ ಶ್ರೀನಿವಾಸ್ ಎಂಬ ವ್ಯಕ್ತಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿನಿಂದಲೂ ಕೆಸಿಆರ್ ಅಂದರೆ ಇಷ್ಟ. ಪ್ರತ್ಯೇಕ ತೆಲಂಗಾಣಕ್ಕಾಗಿ ಕೆಸಿಆರ್‌ನ ಚಳವಳಿಯಿಂದಲೇ  ಅವರ ಸಿದ್ಧಾಂತದತ್ತ ನಾನು ಆಕರ್ಷಿತನಾದೆ. ಕೆಸಿಆರ್ ಸಿಎಂ ಆದ ನಂತರ ಹೆಚ್ಚು ಉತ್ಸುಕನಾದೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಶ್ರೀನಿವಾಸ್ ಕೆಲಸದಿಂದ ರಜೆ ಪಡೆದು ಕೆಸಿಆರ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಭಾಗವಹಿಸಿದ್ದರು.

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು ಅದರಲ್ಲಿ ಕೆಸಿಆರ್ ಮೂರ್ತಿಯನ್ನೂ ಪ್ರತಿಷ್ಠಾಪಿಸಿ ನಿತ್ಯ ಪೂಜಿಸುತ್ತಾರೆ.

ಕೆಸಿಆರ್ ಮೇಲಿನ ಅಭಿಮಾನದಿಂದ ಈ ಮಂದಿರ ನಿರ್ಮಾಣ ಮಾಡಿದ್ದೇನೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಕೆಸಿಆರ್ ಭಾರತದ ಪ್ರಧಾನಿಯಾಗುವುದನ್ನು ನೋಡಬೇಕೆಂಬುದು ನನ್ನ ಆಶಯ ಎಂದು ಅವರು ಹೇಳುತ್ತಾರೆ.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್