AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ. ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ. ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ […]

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 10:22 AM

Share

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ.

ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ.

ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ ಜತೆಗೆ ಐಕ್ಯತೆ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸೇನೆಯಿಂದ ಪೊಲೀಸ್ ಸ್ಮಾರಕಗಳಿಗೂ ಗೌರವ ನಮನ ಸಲ್ಲಿಸಲಾಗುತ್ತೆ.

Published On - 10:20 am, Sat, 2 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು