AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಹರಾಥೆಲ್ ಗ್ರಾಮದಲ್ಲಿ ಗಲಭೆಕೋರರ ಗುಂಡಿನ ದಾಳಿಗೆ ಸೇನೆಯಿಂದ ಪ್ರತಿದಾಳಿ

ಪಡೆಗಳ ತ್ವರಿತ ಕ್ರಮವು ಗುಂಡಿನ ದಾಳಿಯನ್ನು ನಿಲ್ಲಿಸಲು ಕಾರಣವಾಯಿತು ಎಂದು ಸೇನೆ ತಿಳಿಸಿದೆ. ಸೇನೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಮಣಿಪುರದ ಹರಾಥೆಲ್ ಗ್ರಾಮದಲ್ಲಿ ಗಲಭೆಕೋರರ ಗುಂಡಿನ ದಾಳಿಗೆ ಸೇನೆಯಿಂದ ಪ್ರತಿದಾಳಿ
ಮಣಿಪುರದಲ್ಲಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 29, 2023 | 6:50 PM

Share

ಹರಾಥೆಲ್: ಮಣಿಪುರದ (Manipur) ಹರಾಥೆಲ್ ಗ್ರಾಮದ ಬಳಿ ಇಂದು ಬೆಳಗ್ಗೆ ಶಸ್ತ್ರಸಜ್ಜಿತ ಗಲಭೆಕೋರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಭಾರತೀಯ ಸೇನೆ (Indian Army) ಗುರುವಾರ ತಿಳಿಸಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಲವಾರು ಸೈನಿಕರನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಹಿಂಸಾತ್ಮಕ ಪೀಡಿತ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ (Kangpokpi district) ನಡೆದ ಘರ್ಷಣೆಯಲ್ಲಿ ಕೆಲವು ಸಾವುನೋವುಗಳು ವರದಿಯಾಗಿದೆ ಎಂದು ಸೇನೆ ಹೇಳಿದೆ. ಶಸ್ತ್ರಸಜ್ಜಿತ ಗಲಭೆಕೋರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಸೇನೆ ಇದಕ್ಕೆ ಪ್ರತಿದಾಳಿ ನಡೆಸಿದೆ. ಪಡೆಗಳ ತ್ವರಿತ ಕ್ರಮವು ಗುಂಡಿನ ದಾಳಿಯನ್ನು ನಿಲ್ಲಿಸಲು ಕಾರಣವಾಯಿತು ಎಂದು ಸೇನೆ ತಿಳಿಸಿದೆ. ಸೇನೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈಶಾನ್ಯ ರಾಜ್ಯದಲ್ಲಿ ತೀವ್ರವಾದ ಘರ್ಷಣೆ ಪ್ರಾರಂಭವಾದಾಗಿನಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಘರ್ಷಣೆಯಿಂದಾಗಿ 100 ಜನರು ಸಾವಿಗೀಡಾಗಿದ್ದು ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ.ಈಶಾನ್ಯ ರಾಜ್ಯದಲ್ಲಿ, ಮೈತಿ ಸಮುದಾಯದ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನವನ್ನು ನೀಡಬೇಕೆಂಬ ಬೇಡಿಕೆಯ ವಿರುದ್ಧ ಪ್ರದರ್ಶಿಸಲು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಹಿಂಸಾಚಾರಕ್ಕೆ ತಿರುಗಿತ್ತು,

ಬಹಳ ಸಮಯದಿಂದ ಮಣಿಪುರದಲ್ಲಿ ಎರಡೂ ಸಮುದಾಯಗಳ ನಡುವೆ ಜನಾಂಗೀಯ ಉದ್ವಿಗ್ನತೆ ಇದ್ದು, ಸಂಘರ್ಷದ ಉಲ್ಬಣಕ್ಕೆ ಕಾರಣವಾಗಿದೆ. ಏಪ್ರಿಲ್‌ನಲ್ಲಿ ಉದ್ವಿಗ್ನತೆ ಉಲ್ಬಣಗೊಂಡ ನಂತರ, ಮಣಿಪುರ ಹೈಕೋರ್ಟ್ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ನಿರ್ಧಾರವನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ.

ಈಶಾನ್ಯ ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು, ಭಾರತೀಯ ಸೇನೆಯು ಸುಮಾರು 10,000 ಅರೆಸೇನಾ ಪಡೆಗಳು ಮತ್ತು ಪಡೆಗಳನ್ನು ನಿಯೋಜಿಸಿತು. ಇದಲ್ಲದೆ, ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿಯು ಪರಿಸ್ಥಿತಿಯನ್ನು ಪರಿಶೀಲಿಸುತ್ತದೆ ಮತ್ತು ರಾಜ್ಯಪಾಲ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ನೇತೃತ್ವದಲ್ಲಿ ನಾಗರಿಕ ಸಮಾಜದ ಸದಸ್ಯರೊಂದಿಗೆ ಶಾಂತಿ ಸಮಿತಿಯನ್ನು ಸಹ ರಚಿಸಲಾಗುತ್ತದೆ.

ಇದನ್ನೂ ಓದಿ: Manipur Violence: ಮಣಿಪುರದ ಹಿಂಸಾಚಾರ ಸ್ಥಳಕ್ಕೆ ರಾಹುಲ್​​ ಭೇಟಿ, ಬೆಂಗಾವಲು ಪಡೆ ವಾಹನ ತಡೆದ ಪೊಲೀಸರು

ಈ ಸಂಘರ್ಷವು ಯಾವುದಾದರೂ ಪಿತೂರಿಯ ಭಾಗವಾಗಿದೆಯೇ ಎಂದು ನಿರ್ಧರಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ತನಿಖೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ