AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಮೊರೆನಾದಲ್ಲಿ ಸೇನಾ ಆಕಾಂಕ್ಷಿಗಳ ಗುಂಪು ನಡುವೆ ಘರ್ಷಣೆ

ರನ್ನಿಂಗ್ ಟ್ರ್ಯಾಕ್‌ನಲ್ಲಿ ಗುಂಪುಗಳ ನಡುವೆ ಘರ್ಷಣೆಯುಂಟಾಗಿತ್ತು. ಬಳಿಕ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಮಧ್ಯಪ್ರದೇಶದ ಮೊರೆನಾದಲ್ಲಿ ಸೇನಾ ಆಕಾಂಕ್ಷಿಗಳ ಗುಂಪು ನಡುವೆ ಘರ್ಷಣೆ
ಗುಂಪು ನಡುವೆ ಘರ್ಷಣೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 06, 2022 | 8:35 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh)  ಮೊರೆನಾ (Morena) ಜಿಲ್ಲೆಯ ಕ್ರೀಡಾಂಗಣವೊಂದರಲ್ಲಿ ದೇಶದ ಸಶಸ್ತ್ರ ಪಡೆಗಳಿಗೆ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯ ವಿಡಿಯೊಗಳನ್ನು ನೋಡಿದರೆ ಯುವಕರ ಗುಂಪು ಮತ್ತೊಂದು ಗುಂಪನ್ನು ಬೆನ್ನಟ್ಟುವುದನ್ನು ತೋರಿಸುತ್ತವೆ. ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತವೆ, ಉದ್ದವಾದ ಮರದ ಕೋಲುಗಳನ್ನು ಹಿಡಿದು ಅಟ್ಟಾಡಿಸುತ್ತಿರುವುದು ಕಾಣುತ್ತದೆ. ಕೋಲಿನಿಂದ ಇನ್ನೊಬ್ಬರಿಗೆ ಹೊಡೆಯಲು ಪ್ರಯತ್ನಿಸುತ್ತಿರುವಾಗ ಬೀಳುತ್ತಿರುವುದೂ ವಿಡಿಯೊದಲ್ಲಿ ಕಾಣುತ್ತದೆ. ಈ ಘರ್ಷಣೆಯ ಹೊತ್ತಲ್ಲಿ ಗುಂಡಿನ ಚಕಮಕಿಯೂ ವರದಿಯಾಗಿದೆ. ರನ್ನಿಂಗ್ ಟ್ರ್ಯಾಕ್‌ನಲ್ಲಿ ಗುಂಪುಗಳ ನಡುವೆ ಘರ್ಷಣೆಯುಂಟಾಗಿತ್ತು. ಬಳಿಕ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಓಟದ ವಿವಾದದ ನಂತರ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸೇನಾ ಆಕಾಂಕ್ಷಿಗಳು ಗಾಯಗೊಂಡಿದ್ದಾರೆ. ಈವರೆಗೆ ನಾಲ್ಕಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ದೇಶಾದ್ಯಂತ ಪ್ರತಿಭಟನೆಗಳ ನಡುವೆ ಜೂನ್‌ನಲ್ಲಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಗೆ ಆಕಾಂಕ್ಷಿಗಳು ತಯಾರಿ ನಡೆಸುತ್ತಿದ್ದರು.

ಕಳೆದ ಜೂನ್ 14ರಂದು ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯನ್ನು ಘೋಷಿಸಿತ್ತು. ಈ ಯೋಜನೆಯಡಿ 17.5 ವರ್ಷದಿಂದ 21 ವರ್ಷದೊಳಗಿನವರಿಗೆ ಸಶಸ್ತ್ರ ದಳಗಳಲ್ಲಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಿಕೊಳ್ಳುವುದಾಗಿ ಹೇಳಿತ್ತು. ಈ ಪೈಕಿ ಶೇ 25ರಷ್ಟು ಸಿಬ್ಬಂದಿಗೆ 15 ವರ್ಷಗಳ ಸೇವಾವಧಿ ಸಿಗಲಿದೆ ಎಂದು ಕೇಂದ್ರ ಹೇಳಿತ್ತು. ಈ ಯೋಜನೆ ವಿರೋಧಿಸ ದೇಶಾದ್ಯಂತ ಪ್ರತಿಭಟನೆಗಳು ನಡೆದಿತ್ತು. ನಂತರದ ದಿನಗಳಲ್ಲಿ ಸರ್ಕಾರವು ಗರಿಷ್ಠ ವಯೋಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.

Published On - 8:34 pm, Tue, 6 September 22

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ