ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಈ ಕೆಟ್ಟ ವಾತಾವರಣದಿಂದಲೇ ಹೆಲಿಕಾಪ್ಟರ್ ಪತನ ಆಗಿರಬಹುದು ಎಂದು ಹೇಳಲಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on:Mar 11, 2022 | 4:12 PM

ಶ್ರೀನಗರ: ಭಾರತ ಸೇನೆಯ ಚೀತಾ ಹೆಲಿಕಾಪ್ಟರ್ (Indian Army Cheetah helicopter)​ ಇಂದು ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಪತನಗೊಂಡಿದೆ.  ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್​ ಹೊರಟಿತ್ತು. ಆದರೆ ಗುರೆಜ್​ ವಲಯದ ಗುರ್ಜನ್​ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿಯೇ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಹಿರಿಯ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

Published On - 4:02 pm, Fri, 11 March 22

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ