AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಈ ಕೆಟ್ಟ ವಾತಾವರಣದಿಂದಲೇ ಹೆಲಿಕಾಪ್ಟರ್ ಪತನ ಆಗಿರಬಹುದು ಎಂದು ಹೇಳಲಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 11, 2022 | 4:12 PM

Share

ಶ್ರೀನಗರ: ಭಾರತ ಸೇನೆಯ ಚೀತಾ ಹೆಲಿಕಾಪ್ಟರ್ (Indian Army Cheetah helicopter)​ ಇಂದು ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಪತನಗೊಂಡಿದೆ.  ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್​ ಹೊರಟಿತ್ತು. ಆದರೆ ಗುರೆಜ್​ ವಲಯದ ಗುರ್ಜನ್​ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿಯೇ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಹಿರಿಯ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

Published On - 4:02 pm, Fri, 11 March 22

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ