AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಈ ಕೆಟ್ಟ ವಾತಾವರಣದಿಂದಲೇ ಹೆಲಿಕಾಪ್ಟರ್ ಪತನ ಆಗಿರಬಹುದು ಎಂದು ಹೇಳಲಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 11, 2022 | 4:12 PM

Share

ಶ್ರೀನಗರ: ಭಾರತ ಸೇನೆಯ ಚೀತಾ ಹೆಲಿಕಾಪ್ಟರ್ (Indian Army Cheetah helicopter)​ ಇಂದು ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಪತನಗೊಂಡಿದೆ.  ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್​ ಹೊರಟಿತ್ತು. ಆದರೆ ಗುರೆಜ್​ ವಲಯದ ಗುರ್ಜನ್​ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿಯೇ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಹಿರಿಯ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

Published On - 4:02 pm, Fri, 11 March 22

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ