AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಹವಾಮಾನದಿಂದಾಗಿ ಉಧಂಪುರದಲ್ಲಿ ಅಪಘಾತಕ್ಕೀಡಾದ ಸೇನಾ ಹೆಲಿಕಾಪ್ಟರ್; ಇಬ್ಬರು ಪೈಲಟ್​​ಗಳು ದುರ್ಮರಣ

ಸೇನಾ ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದಾಗಿ ಅಪಘಾತಕ್ಕೀಡಾಯಿತು. ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆಯೇ ಅಥವಾ ನೆಲಕ್ಕೆ ಅಪ್ಪಳಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೈಲಟ್ ಮತ್ತು ಸಹ ಪೈಲಟ್ ಇಬ್ಬರೂ ಗಾಯಗೊಂಡಿದ್ದಾರೆ. ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಕೆಟ್ಟ ಹವಾಮಾನದಿಂದಾಗಿ ಉಧಂಪುರದಲ್ಲಿ ಅಪಘಾತಕ್ಕೀಡಾದ ಸೇನಾ ಹೆಲಿಕಾಪ್ಟರ್; ಇಬ್ಬರು ಪೈಲಟ್​​ಗಳು ದುರ್ಮರಣ
ಹೆಲಿಕಾಪ್ಟರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 21, 2021 | 4:58 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ (Udhampur) ಜಿಲ್ಲೆಯ ಶಿವ ಗರ್ ಧಾರ್​​ನಲ್ಲಿ(Shiv Garh Dhar)  ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಪ್ರದೇಶದಲ್ಲಿ ಮಂಜು ಮುಸುಕಿದ ಕಾರಣ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಶಿವ ಗರ್ ಧಾರ್​​ನಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳನ್ನು ಕಳುಹಿಸಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚುವರಿ ಮಂಜು ಇರುವುದರಿಂದ ಗೋಚರತೆ ಕಡಿಮೆಯಾಗಿದೆ ಎಂದು ಡಿಐಜಿ ಉಧಂಪುರ್ ಸುಲೇಮಾನ್ ಚೌಧರಿ ಅವರು ಹೇಳಿದ್ದಾರೆ. ಹೆಲಿಕಾಪ್ಟರ್ ಅಪಘಾತಕ್ಕೀಡಾದ ಶಬ್ದಗಳು ಕೇಳಿಬಂದವು ಎಂದು ಅಧಿಕಾರಿ ಹೇಳಿದರು.

ಸೇನಾ ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದಾಗಿ ಅಪಘಾತಕ್ಕೀಡಾಯಿತು. ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆಯೇ ಅಥವಾ ನೆಲಕ್ಕೆ ಅಪ್ಪಳಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೈಲಟ್ ಮತ್ತು ಸಹ ಪೈಲಟ್ ಇಬ್ಬರೂ ಗಾಯಗೊಂಡಿದ್ದಾರೆ. ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಷ್ಟೊತ್ತರಲ್ಲಿ ಸ್ಥಳೀಯರು ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಹೊರತರಲು ಸಹಾಯ ಮಾಡಿದ್ದರು

“ಇಂದು ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿರುವಾಗ, ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಉಧಂಪುರ್ ಜಿಲ್ಲೆಯ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಅವರನ್ನುಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು  ಭಾರತೀಯ ಸೇನೆ ಹೇಳಿದೆ.

ಈ ಮೊದಲು, ಶೋಧ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಮತ್ತು ಗಾಯಗೊಂಡ ಜನರನ್ನು ಆಳವಾದ ಕಣಿವೆಯಿಂದ ಮೇಲೆತ್ತಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ .

ಅಪಘಾತದಲ್ಲಿ  ಇಬ್ಬರು ಪೈಲಟ್ ಗಳು  ಮೃತಪಟ್ಟಿದ್ದಾರೆ ಎಂದು  ಸೇನಾ ಮೂಲಗಳು ಹೇಳಿವೆ

ಸೇನಾ ವಿಮಾನಯಾನ ಹೆಲಿಕಾಪ್ಟರ್ ಪತನಗೊಂಡಾಗ ಅದರ ಪೈಲಟ್‌ಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಸ್ಥಳೀಯರು ರಕ್ಷಿಸಿದರು ಮತ್ತು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಇಬ್ಬರೂ ಪೈಲಟ್‌ಗಳು ಪ್ರಮುಖ ದರ್ಜೆಯ ಅಧಿಕಾರಿಗಳು ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಾವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಆದರೆ ದುರದೃಷ್ಟವಶಾತ್ ಇಬ್ಬರೂ ಪ್ರಾಣ ಕಳೆದುಕೊಂಡರು” ಎಂದು ಅಧಿಕಾರಿ ಹೇಳಿದರು.

ಸೇನೆಯ ಉತ್ತರ ಕಮಾಂಡ್ ಟ್ವಿಟರ್ ನಲ್ಲಿ ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ “21 ಸೆಪ್ಟೆಂಬರ್ 2021 ರಂದು ಪಟ್ನಿಟಾಪ್ ನಲ್ಲಿ ಕರ್ತವ್ಯ ನಿರ್ವಹಣೆ ವೇಳೆ  ಹುತಾತ್ಮರಾಗಿದ್ದಾರೆ ಎಂದು ಟ್ವೀಟ್ ಮಾಡಿದೆ.

ಮಂಗಳವಾರ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕುಮಾರವ್ಯಾಸನ ಪದ್ಯ ಓದಿ ಸಿದ್ದರಾಮಯ್ಯಗೆ ಟಾಂಗ್; ಮೋದಿ ಪ್ರಧಾನಿ ಆದ್ಮೇಲೆ ದೇಶದ ಬೆಲೆ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

(Army chopper met with the accident in Udhampur due to bad weather rescue teams on way)

Published On - 12:36 pm, Tue, 21 September 21

Follow Us
Web contact
Web contact

TV9 Kannada

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ