AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘ಅಕ್ಸೆಲ್’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು
DogImage Credit source: NDTV
TV9 Web
| Updated By: ನಯನಾ ರಾಜೀವ್|

Updated on:Jul 31, 2022 | 1:17 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಭಯೋತ್ಪಾದಕರು ಆಕ್ಸೆಲ್ ಮೇಲೆ ಗುಂಡು ಹಾರಿಸಿದಾಗ ಭಯೋತ್ಪಾದಕರು ಇರುವ ಸ್ಥಳವನ್ನು ಗುರುತಿಸಲು ಬಾಡಿಕ್ಯಾಮ್‌ಗಳನ್ನು ಅಳವಡಿಸಲಾಗಿರುವ ಸೇನೆಯ ಎರಡು ಸ್ನಿಫರ್ ಡಾಗ್‌ಗಳನ್ನು ಒಳಗೆ ಕಳುಹಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆ ಸೇರಿದಂತೆ ಕನಿಷ್ಠ ಮೂವರು ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಆಧರಿಸಿ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಭಯೋತ್ಪಾದಕರ ಚಲನವಲನವನ್ನು ಮೇಲ್ವಿಚಾರಣೆ ಮಾಡಲು, ಎರಡು ಸೇನಾ ನಾಯಿಗಳು- ಬಜಾಜ್ ಮತ್ತು ಆಕ್ಸೆಲ್- ಬಾಡಿಕ್ಯಾಮ್‌ಗಳನ್ನು ಧರಿಸಿ ಟಾರ್ಗೆಟ್ ಹೌಸ್‌ಗೆ ಕಳುಹಿಸಲಾಯಿತು.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆಯುತ್ತಿದ್ದಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಅಲೆಕ್ಸ್‌ಗೆ ಮೂರು ಬುಲೆಟ್‌ಗಳಿಂದ ಹೊಡೆದರು ತಕ್ಷಣವೇ ಶ್ವಾನ ಮೃತಪಟ್ಟಿದೆ.

ಕ್ರೀರಿ ಪ್ರದೇಶದ ವಾನಿಗಮ್​ ಬಾಲಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ಹಾಗೆಯೇ ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ ಜತೆ ಸಂಪರ್ಕ ಹೊಂದಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 1:15 pm, Sun, 31 July 22

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ