AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

Follow Us
KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ!
KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ!
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ