AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ