AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ