AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಯೋಧ, ಇಬ್ಬರು ಪೊಲೀಸ್​ ಅಧಿಕಾರಿಗೆ ಗಾಯ

ರಾಜೌರಿ ಮತ್ತು ಪೂಂಚ್​​ನಲ್ಲಿ ಅಡಗಿರುವ ಉಗ್ರರ ಗುಂಪಿನ ಬಳಿ ಭಾರಿ ಶಸ್ತ್ರಾಸ್ತ್ರಗಳಿವೆ. ಹಾಗೇ ತರಬೇತಿಯನ್ನೂ ಪಡೆದವರಾಗಿದ್ದಾರೆ ಎಂದು ಸೇನಾ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಯೋಧ, ಇಬ್ಬರು ಪೊಲೀಸ್​ ಅಧಿಕಾರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 10:36 AM

Share

ಪೂಂಚ್ (Poonch Encounter)​​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದ್ದು, ಇಂದು ಮುಂಜಾನೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂಂಚ್​​ನಲ್ಲಿ ಅಕ್ಟೋಬರ್​ 10 ರಾತ್ರಿ ಉಗ್ರರ ದಾಳಿಗೆ ಮೂವರು ಯೋಧರು ಮತ್ತು ಒಬ್ಬ ಕಿರಿಯ ನಿಯೋಜಿತ ಅಧಿಕಾರಿ ಮೃತಪಟ್ಟಿದ್ದಾರೆ. ಅವರು ಹುತಾತ್ಮರಾದ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಗುರುತಿಸಲು ಈಗಾಗಲೇ ಬಂಧಿತನಾದ  ಡೆಟೆನ್ಯೂ ಝಿಯಾ ಮುಸ್ತಫಾ ಎಂಬ ಲಷ್ಕರ್​ ಎ ತೊಯ್ಬಾದ ಉಗ್ರನನ್ನು ಭದ್ರತಾ ಸಿಬ್ಬಂದಿ ಕರೆದೊಯ್ದಿದ್ದರು. ಈ ವೇಳೆ ಅಲ್ಲಿ ಅಡಗಿದ್ದ ಉಗ್ರರು ಒಮ್ಮೆಲೇ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಡೆಟೆನ್ಯೂ ಝಿಯಾ ಮುಸ್ತಫಾನನ್ನು ಸೇನೆ ಮತ್ತು ಪೊಲೀಸ್​ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ಕರೆದೊಯ್ದರು. ಅದು  ಗೊತ್ತಾಗುತ್ತಿದ್ದಂತೆ ಅಡಗಿದ್ದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಈ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿ ಮತ್ತು ಒಬ್ಬ ಯೋಧ ಗಾಯಗೊಂಡಿದ್ದಾರೆ. ಜತೆಗೆ ಇದ್ದ ಉಗ್ರ ಝಿಯಾ ಮುಸ್ತಫಾ ಕೂಡ ಗಾಯಗೊಂಡಿದ್ದಾನೆ. ಒಂದೇ ಸಮಯ ಗುಂಡಿನ ದಾಳಿ ನಡೆಯುತ್ತಲೇ ಇದ್ದುದರಿಂದ ಆತನಿಗೆ ಅಲ್ಲಿಂದ ಹೊರಬೀಳಲೂ ಸಾಧ್ಯವಾಗಲಿಲ್ಲ ಎಂದೂ ತಿಳಿಸಿದ್ದಾರೆ.

ಪೂಂಚ್​​ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ರಾಜೌರಿ ಮತ್ತು ಪೂಂಚ್​​ನಲ್ಲಿ ಅಡಗಿರುವ ಉಗ್ರರ ಗುಂಪಿನ ಬಳಿ ಭಾರಿ ಶಸ್ತ್ರಾಸ್ತ್ರಗಳಿವೆ. ಹಾಗೇ ತರಬೇತಿಯನ್ನೂ ಪಡೆದವರಾಗಿದ್ದಾರೆ. ಜಮ್ಮು-ಕಾಶ್ಮೀರದ ಜೈಲಿನಲ್ಲಿ ಈಗಿರುವ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದ ಉಗ್ರರೇ ಆಗಿದ್ದಾರೆ. ಬಂಧಿತ ಉಗ್ರರ ಮೊಬೈಲ್​ ಪರಿಶೀಲನೆ ವೇಳೆ ಇದು ಗೊತ್ತಾಗಿದೆ ಎಂದೂ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.  ಹಾಗೇ, ಇವರೆಲ್ಲರೂ ಪಾಕಿಸ್ತಾನ ಪೋಷಿತ ಉಗ್ರರೇ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಉಪೇಂದ್ರ ಬಗ್ಗೆ ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಸುದೀಪ್​ ಮಾತು; ಉಪ್ಪಿ ಅಂದ್ರೆ ಸ್ಫೂರ್ತಿಯ ಕಿಚ್ಚು

ನಿರೂಪಣೆಯಿಂದ ಅರುಣ್​ ಸಾಗರ್​ ನಿವೃತ್ತಿ ತಗೊಂಡ್ರಾ? ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಕಾಲೆಳೆದ ಸುದೀಪ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ