AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಯೋಧ, ಇಬ್ಬರು ಪೊಲೀಸ್​ ಅಧಿಕಾರಿಗೆ ಗಾಯ

ರಾಜೌರಿ ಮತ್ತು ಪೂಂಚ್​​ನಲ್ಲಿ ಅಡಗಿರುವ ಉಗ್ರರ ಗುಂಪಿನ ಬಳಿ ಭಾರಿ ಶಸ್ತ್ರಾಸ್ತ್ರಗಳಿವೆ. ಹಾಗೇ ತರಬೇತಿಯನ್ನೂ ಪಡೆದವರಾಗಿದ್ದಾರೆ ಎಂದು ಸೇನಾ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಯೋಧ, ಇಬ್ಬರು ಪೊಲೀಸ್​ ಅಧಿಕಾರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 10:36 AM

Share

ಪೂಂಚ್ (Poonch Encounter)​​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದ್ದು, ಇಂದು ಮುಂಜಾನೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂಂಚ್​​ನಲ್ಲಿ ಅಕ್ಟೋಬರ್​ 10 ರಾತ್ರಿ ಉಗ್ರರ ದಾಳಿಗೆ ಮೂವರು ಯೋಧರು ಮತ್ತು ಒಬ್ಬ ಕಿರಿಯ ನಿಯೋಜಿತ ಅಧಿಕಾರಿ ಮೃತಪಟ್ಟಿದ್ದಾರೆ. ಅವರು ಹುತಾತ್ಮರಾದ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಗುರುತಿಸಲು ಈಗಾಗಲೇ ಬಂಧಿತನಾದ  ಡೆಟೆನ್ಯೂ ಝಿಯಾ ಮುಸ್ತಫಾ ಎಂಬ ಲಷ್ಕರ್​ ಎ ತೊಯ್ಬಾದ ಉಗ್ರನನ್ನು ಭದ್ರತಾ ಸಿಬ್ಬಂದಿ ಕರೆದೊಯ್ದಿದ್ದರು. ಈ ವೇಳೆ ಅಲ್ಲಿ ಅಡಗಿದ್ದ ಉಗ್ರರು ಒಮ್ಮೆಲೇ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಡೆಟೆನ್ಯೂ ಝಿಯಾ ಮುಸ್ತಫಾನನ್ನು ಸೇನೆ ಮತ್ತು ಪೊಲೀಸ್​ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ಕರೆದೊಯ್ದರು. ಅದು  ಗೊತ್ತಾಗುತ್ತಿದ್ದಂತೆ ಅಡಗಿದ್ದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಈ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿ ಮತ್ತು ಒಬ್ಬ ಯೋಧ ಗಾಯಗೊಂಡಿದ್ದಾರೆ. ಜತೆಗೆ ಇದ್ದ ಉಗ್ರ ಝಿಯಾ ಮುಸ್ತಫಾ ಕೂಡ ಗಾಯಗೊಂಡಿದ್ದಾನೆ. ಒಂದೇ ಸಮಯ ಗುಂಡಿನ ದಾಳಿ ನಡೆಯುತ್ತಲೇ ಇದ್ದುದರಿಂದ ಆತನಿಗೆ ಅಲ್ಲಿಂದ ಹೊರಬೀಳಲೂ ಸಾಧ್ಯವಾಗಲಿಲ್ಲ ಎಂದೂ ತಿಳಿಸಿದ್ದಾರೆ.

ಪೂಂಚ್​​ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ರಾಜೌರಿ ಮತ್ತು ಪೂಂಚ್​​ನಲ್ಲಿ ಅಡಗಿರುವ ಉಗ್ರರ ಗುಂಪಿನ ಬಳಿ ಭಾರಿ ಶಸ್ತ್ರಾಸ್ತ್ರಗಳಿವೆ. ಹಾಗೇ ತರಬೇತಿಯನ್ನೂ ಪಡೆದವರಾಗಿದ್ದಾರೆ. ಜಮ್ಮು-ಕಾಶ್ಮೀರದ ಜೈಲಿನಲ್ಲಿ ಈಗಿರುವ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದ ಉಗ್ರರೇ ಆಗಿದ್ದಾರೆ. ಬಂಧಿತ ಉಗ್ರರ ಮೊಬೈಲ್​ ಪರಿಶೀಲನೆ ವೇಳೆ ಇದು ಗೊತ್ತಾಗಿದೆ ಎಂದೂ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.  ಹಾಗೇ, ಇವರೆಲ್ಲರೂ ಪಾಕಿಸ್ತಾನ ಪೋಷಿತ ಉಗ್ರರೇ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಉಪೇಂದ್ರ ಬಗ್ಗೆ ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಸುದೀಪ್​ ಮಾತು; ಉಪ್ಪಿ ಅಂದ್ರೆ ಸ್ಫೂರ್ತಿಯ ಕಿಚ್ಚು

ನಿರೂಪಣೆಯಿಂದ ಅರುಣ್​ ಸಾಗರ್​ ನಿವೃತ್ತಿ ತಗೊಂಡ್ರಾ? ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಕಾಲೆಳೆದ ಸುದೀಪ್​

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ