AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬರಮತಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಡ್​ಶೀಟ್​ಗಾಗಿ ಜಗಳ, ಸೈನಿಕನನ್ನು ಇರಿದು ಕೊಂದ ವ್ಯಕ್ತಿ

ಸಬರಮತಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್​ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು.

ಸಬರಮತಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಡ್​ಶೀಟ್​ಗಾಗಿ ಜಗಳ, ಸೈನಿಕನನ್ನು ಇರಿದು ಕೊಂದ ವ್ಯಕ್ತಿ
ರೈಲು
ನಯನಾ ರಾಜೀವ್
|

Updated on:Nov 04, 2025 | 9:57 AM

Share

ಬಿಕಾನೇರ್, ನವೆಂಬರ್ 04: ಸಬರಮತಿ ಎಕ್ಸ್ಪ್ರೆಸ್ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು. ಆರೋಪಿಯನ್ನು ಜುಬೈರ್ ಮೆಮನ್ ಎಂದು ಗುರುತಿಸಲಾಗಿದೆ. ರಾಜಸ್ಥಾನ ಬಿಕಾನೆರ್ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿವರಗಳ ಪ್ರಕಾರ, ಮೃತ ಜವಾನ ಫಿರೋಜ್‌ಪುರ ಕಂಟೋನ್ಮೆಂಟ್‌ನಿಂದ ರೈಲು ಹತ್ತಿದ್ದರು. ಅವರು ಗುಜರಾತ್‌ನ ಸಬರಮತಿ ನಿವಾಸಿಯಾಗಿದ್ದು ಮನೆಗೆ ಪ್ರಯಾಣಿಸುತ್ತಿದ್ದರು. ಬೆಡ್‌ಶೀಟ್‌ನ ಬಗ್ಗೆ ನಡೆದ ವಾಗ್ವಾದದ ನಂತರ, ಅವರನ್ನು ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಸೈನಿಕ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ:  ಇದೆಂಥಾ ಪ್ರೀತಿ, ಮದುವೆಯಾಗು ಎಂದಿದ್ದಕ್ಕೆ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚೇಬಿಟ್ಟ

ಇಲ್ಲಿಯವರೆಗಿನ ಮಾಹಿತಿಯ ಪ್ರಕಾರ, ಈ ವಿವಾದ ಎಸಿ ಕೋಚ್ ಒಳಗೆ ನಡೆದಿದೆ. ಈ ಜಗಳ ನಡೆದ ನಂತರ, ಜುಬೈರ್ ಜಿಗ್ನೇಶ್ ನನ್ನು ಹುಡುಕುತ್ತಾ ತನ್ನ ಕೋಚ್ ಬಳಿಗೆ ಹೋದರು. ನಂತರ ಅವರು ಸೈನಿಕನ ಕಾಲಿನ ಪಾದದ ಭಾಗಕ್ಕೆ ಇರಿದಿದ್ದರು. ಬಳಿಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಈ ವರ್ಷದ ಆರಂಭದಲ್ಲಿ, ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಒಬ್ಬ ಸೈನಿಕರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ವರದಿಗಳ ಪ್ರಕಾರ, ಕೊಲೆ ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ಸೈನಿಕ ರಜೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಏಪ್ರಿಲ್ 10 ರಂದು ಸೈನಿಕನ ತಲೆ ಮತ್ತು ಎದೆಗೆ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಮೃತರನ್ನು ಸಹರಾನ್‌ಪುರದ ಮುದಿಖೇಡಿ ಗ್ರಾಮದ 27 ವರ್ಷದ ವಿಕ್ರಾಂತ್ ಗುರ್ಜರ್ ಎಂದು ಗುರುತಿಸಲಾಗಿದೆ. ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು ಮತ್ತು ಕೊಲೆ ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ನಾಲ್ಕು ದಿನಗಳ ರಜೆಯ ಮೇಲೆ ಮನೆಗೆ ಮರಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Tue, 4 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ