AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siachen glacier: ಸಿಯಾಚಿನ್​ನಲ್ಲಿ ಅಗ್ನಿ ಅವಘಡ; ಸೇನಾಧಿಕಾರಿ ಹುತಾತ್ಮ, ಮೂವರಿಗೆ ಗಾಯ

ಹುತಾತ್ಮ ಸೇನಾ ಅಧಿಕಾರಿಯನ್ನು ಕ್ಯಾಪ್ಟನ್ ಅಂಶುಮಾನ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ರೆಜಿಮೆಂಟಲ್ ಮೆಡಿಕಲ್ ಆಫೀಸರ್ ಆಗಿದ್ದರು.

Siachen glacier: ಸಿಯಾಚಿನ್​ನಲ್ಲಿ ಅಗ್ನಿ ಅವಘಡ; ಸೇನಾಧಿಕಾರಿ ಹುತಾತ್ಮ, ಮೂವರಿಗೆ ಗಾಯ
ಸಿಯಾಚಿನ್Image Credit source: Twitter
Ganapathi Sharma
|

Updated on: Jul 19, 2023 | 8:10 PM

Share

ನವದೆಹಲಿ: ಸಿಯಾಚಿನ್ ಹಿಮಪರ್ವತ ಪ್ರದೇಶದಲ್ಲಿ (Siachen glacier) ಸೇನೆಯ ಮದ್ದುಗುಂಡುಗಳ ಬಂಕರ್‌ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಮುಂಜಾನೆ 3.30 ರ ಸುಮಾರಿಗೆ ಘಟನೆ ಸಂಭವಿಸಿತ್ತು ಎನ್ನಲಾಗಿದೆ. ಗಾಯಗೊಂಡ ಅಧಿಕಾರಿಗಳನ್ನು ಹೆಲಿಕಾಪ್ಟರ್ ಮೂಲಕ ಚಂಡೀಗಢದ ಆಸ್ಪತ್ರೆಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಹುತಾತ್ಮ ಸೇನಾ ಅಧಿಕಾರಿಯನ್ನು ಕ್ಯಾಪ್ಟನ್ ಅಂಶುಮಾನ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ರೆಜಿಮೆಂಟಲ್ ಮೆಡಿಕಲ್ ಆಫೀಸರ್ ಆಗಿದ್ದರು. ಇತರ ಮೂವರಿಗೆ ಹೊಗೆಯಿಂದಾಗಿ ಉಸಿರಾಟ ಸಮಸ್ಯೆ ಮತ್ತು ಸುಟ್ಟ ಗಾಯಗಳಾಗಿವೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಮದ್ದುಗುಂಡುಗಳ ಟೆಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಸಿಯಾಚಿನ್ ಗ್ಲೇಸಿಯರ್, 76 ಕಿಮೀ ಪ್ರದೇಶದಲ್ಲಿ ಹರಡಿಕೊಂಡಿದೆ, ಇದು ಕಾಶ್ಮೀರದ ವಿವಾದಿತ ಪ್ರದೇಶದ ಉತ್ತರ ಭಾಗದಲ್ಲಿದೆ. ಸಿಯಾಚಿನ್ ಭೂಮಿಯ ಮೇಲಿನ ಅತ್ಯಂತ ಎತ್ತರದ ಯುದ್ಧಭೂಮಿ ಎಂದು ಪರಿಗಣಿಸಲ್ಪಟ್ಟಿದೆ.

ಇದನ್ನೂ ಓದಿ: ಅಮೆರಿಕದಲ್ಲಿದ್ದ 105 ಪುರಾತನ ವಸ್ತುಗಳು ಮರಳಿ ಭಾರತಕ್ಕೆ, US​ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಮೋದಿ

ಭಾರತವು ಪಾಕಿಸ್ತಾನ ಮತ್ತು ಚೀನಾದಿಂದ ಅವಳಿ ಸೇನಾ ಬೆದರಿಕೆಗಳನ್ನು ಎದುರಿಸುತ್ತಿದೆ. ಆದಾಗ್ಯೂ, ಯಾವುದೇ ಗುಂಡಿನ ಕಾಳಗಕ್ಕಿಂತಲೂ ಸಿಯಾಚಿನ್ ಹಿಮಪರ್ವತದಲ್ಲಿನ ಹವಾಮಾನ ವೈಪರೀತ್ಯಗಳು ಮತ್ತು ಹಿಮಕುಸಿತಗಳೇ ಹೆಚ್ಚು ಸೈನಿಕರನ್ನು ಬಲಿಪಡೆದಿವೆ.

ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 2019 ರಲ್ಲಿ ನಾಲ್ವರು ಸೇನಾ ಯೋಧರು ಮತ್ತು ಇಬ್ಬರು ನಾಗರಿಕ ಪೋರ್ಟರ್‌ಗಳು ಸೇರಿದಂತೆ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದರು. ಇಂಡಿಯಾ ಟುಡೇ ವರದಿಯ ಪ್ರಕಾರ, ಹವಾಮಾನ ವೈಪರೀತ್ಯ ಮತ್ತು ಹಿಮಕುಸಿತದಿಂದಾಗಿ 800ಕ್ಕೂ ಹೆಚ್ಚು ಸೇನಾ ಯೋಧರು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ