AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಾಸ್ತ್ರ ಸಾಮಾಗ್ರಿ ತೆಗೆದುಕೊಂಡು ಹೋಗಲು ₹20 ಸಾವಿರ ನೀಡಲಾಗಿತ್ತು: ಉರಿಯಲ್ಲಿ ಬಂಧಿತ ಪಾಕ್ ಉಗ್ರ

Pakistani terrorist:ಉರಿ ಸೆಕ್ಟರ್‌ನ ಸೇನಾ ಶಿಬಿರದಲ್ಲಿ ಮಾಧ್ಯಮಗಳೊಂದಿಗೆ ಪತ್ರಾ ಸಂವಹನ ನಡೆಸುತ್ತಿರುವುದು ವಿಡಿಯೊದಲ್ಲಿದೆ.  ಬಾರಾಮುಲ್ಲಾ ಜಿಲ್ಲೆಯ ಪಟ್ಟಣಕ್ಕೆ ದಾಟಲು ಮತ್ತು ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ತಮ್ಮ ನಿರ್ವಾಹಕರು ₹ 20,000  ನೀಡಿದ್ದಾರೆ. ಇದಿಷ್ಟು ಹಣ ನೀಡಿದ ನಂತರ ಎರಡನೇ ಕಂತಿನಲ್ಲಿ ₹ 30,000 ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಪಾತ್ರ ಹೇಳಿದ್ದಾನೆ.

ಶಸ್ತ್ರಾಸ್ತ್ರ ಸಾಮಾಗ್ರಿ ತೆಗೆದುಕೊಂಡು ಹೋಗಲು ₹20 ಸಾವಿರ ನೀಡಲಾಗಿತ್ತು: ಉರಿಯಲ್ಲಿ ಬಂಧಿತ ಪಾಕ್ ಉಗ್ರ
ಅಲಿ ಬಾಬರ್ ಪತ್ರಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 29, 2021 | 5:42 PM

Share

ಶ್ರೀನಗರ: ಬಂಧಿತ ಪಾಕಿಸ್ತಾನಿ ಉಗ್ರ ಅಲಿ ಬಾಬರ್ ಪತ್ರಾ(Ali Babar Patra) ವಿಡಿಯೊವನ್ನು ಸೇನೆಯು ಇಂದು ಬಿಡುಗಡೆ ಮಾಡಿದ್ದು, ತಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನ ಸೇನೆಯಿಂದ ತರಬೇತಿ ಪಡೆದಿದ್ದೇನೆ ಎಂದು ಉಗ್ರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಸೋಮವಾರ ಸೇನೆ ನಡೆಸಿದ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆ ವೇಳೆ 19 ವರ್ಷದ ಉಗ್ರ ಶರಣಾಗಿದ್ದಾನೆ.

ಉರಿ ಸೆಕ್ಟರ್‌ನ ಸೇನಾ ಶಿಬಿರದಲ್ಲಿ ಮಾಧ್ಯಮಗಳೊಂದಿಗೆ ಪತ್ರಾ ಸಂವಹನ ನಡೆಸುತ್ತಿರುವುದು ವಿಡಿಯೊದಲ್ಲಿದೆ. ಬಾರಾಮುಲ್ಲಾ ಜಿಲ್ಲೆಯ ಪಟ್ಟಣಕ್ಕೆ ದಾಟಲು ಮತ್ತು ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ತಮ್ಮ ನಿರ್ವಾಹಕರು ₹ 20,000  ನೀಡಿದ್ದಾರೆ. ಇದಿಷ್ಟು ಹಣ ನೀಡಿದ ನಂತರ ಎರಡನೇ ಕಂತಿನಲ್ಲಿ ₹ 30,000 ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಪಾತ್ರ ಹೇಳಿದ್ದಾನೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PKO) ಮುಜಾಫರಾಬಾದ್‌ನಲ್ಲಿರುವ ಲಷ್ಕರ್ ಶಿಬಿರದಲ್ಲಿ ತಾನು ತರಬೇತಿ ಪಡೆದಿದ್ದೇನೆ ಮತ್ತು ಸೆಪ್ಟೆಂಬರ್ 18 ರಂದು ಆರು ಭಯೋತ್ಪಾದಕರ ಗುಂಪಿನೊಂದಿಗೆ ನುಸುಳಿದೆ ಎಂದು ಪತ್ರಾ ಹೇಳಿದ್ದಾನೆ.

ಇತ್ತೀಚಿನ ವರ್ಷಗಳಲ್ಲಿ ಸೇನೆಯು ಪಾಕಿಸ್ತಾನದ ಭಯೋತ್ಪಾದಕರನ್ನು ನಿಯಂತ್ರಣ ರೇಖೆ ಬಳಿ ಸೆರೆಹಿಡಿದ ಅಪರೂಪದ ಕಾರ್ಯಾಚರಣೆ ಇದಾಗಿದೆ. 2016 ರಲ್ಲಿ ಉರಿಯಲ್ಲಿ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಭಯೋತ್ಪಾದಕರು ದಾಟಿದ ಅದೇ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ತಡೆಯಲಾಗಿದೆ. ಉರಿ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗಿದ್ದರು.

ದಿನಗಳ ನಂತರ ಭಾರತವು ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳನ್ನು ನಾಶಮಾಡಲು ಗಡಿಯುದ್ದಕ್ಕೂ ಸರ್ಜಿಕಲ್ ಸ್ಟ್ರೈಕ್‌ಗಳನ್ನು ಆರಂಭಿಸಿತು.  ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳನ್ನು ಸಕ್ರಿಯಗೊಳಿಸಲಾಗಿದೆ ಮತ್ತು ಇತ್ತೀಚಿನ ಒಳನುಸುಳುವಿಕೆ ಪ್ರಯತ್ನಗಳು ಕಾಶ್ಮೀರದಲ್ಲಿ ದಾಳಿಗಳನ್ನು ನಡೆಸುವ ಗುರಿಯನ್ನು ಹೊಂದಿವೆ ಎಂದು ಸೇನೆಯು ಹೇಳಿದೆ.

ಇದನ್ನೂ ಓದಿ: ಉರಿ ವಲಯದಲ್ಲಿ ಉಗ್ರರ ನುಸುಳುವಿಕೆ ವಿಫಲಗೊಳಿಸಿದ ಭಾರತೀಯ ಸೇನೆ; ಕಾರ್ಯಾಚರಣೆಯ ವಿವರ ಬಿಚ್ಚಿಟ್ಟ ಅಧಿಕಾರಿಗಳು

ಇದನ್ನೂ ಓದಿ: ಉರಿ ಸೆಕ್ಟರ್​​ನಲ್ಲಿ ಒಳನುಸುಳುವಿಕೆ: ಸೇನಾಪಡೆಯಿಂದ ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬ ಸೆರೆ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು