AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಾಸ್ತ್ರ ಸಾಮಾಗ್ರಿ ತೆಗೆದುಕೊಂಡು ಹೋಗಲು ₹20 ಸಾವಿರ ನೀಡಲಾಗಿತ್ತು: ಉರಿಯಲ್ಲಿ ಬಂಧಿತ ಪಾಕ್ ಉಗ್ರ

Pakistani terrorist:ಉರಿ ಸೆಕ್ಟರ್‌ನ ಸೇನಾ ಶಿಬಿರದಲ್ಲಿ ಮಾಧ್ಯಮಗಳೊಂದಿಗೆ ಪತ್ರಾ ಸಂವಹನ ನಡೆಸುತ್ತಿರುವುದು ವಿಡಿಯೊದಲ್ಲಿದೆ.  ಬಾರಾಮುಲ್ಲಾ ಜಿಲ್ಲೆಯ ಪಟ್ಟಣಕ್ಕೆ ದಾಟಲು ಮತ್ತು ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ತಮ್ಮ ನಿರ್ವಾಹಕರು ₹ 20,000  ನೀಡಿದ್ದಾರೆ. ಇದಿಷ್ಟು ಹಣ ನೀಡಿದ ನಂತರ ಎರಡನೇ ಕಂತಿನಲ್ಲಿ ₹ 30,000 ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಪಾತ್ರ ಹೇಳಿದ್ದಾನೆ.

ಶಸ್ತ್ರಾಸ್ತ್ರ ಸಾಮಾಗ್ರಿ ತೆಗೆದುಕೊಂಡು ಹೋಗಲು ₹20 ಸಾವಿರ ನೀಡಲಾಗಿತ್ತು: ಉರಿಯಲ್ಲಿ ಬಂಧಿತ ಪಾಕ್ ಉಗ್ರ
ಅಲಿ ಬಾಬರ್ ಪತ್ರಾ
TV9 Web
| Edited By: |

Updated on: Sep 29, 2021 | 5:42 PM

Share

ಶ್ರೀನಗರ: ಬಂಧಿತ ಪಾಕಿಸ್ತಾನಿ ಉಗ್ರ ಅಲಿ ಬಾಬರ್ ಪತ್ರಾ(Ali Babar Patra) ವಿಡಿಯೊವನ್ನು ಸೇನೆಯು ಇಂದು ಬಿಡುಗಡೆ ಮಾಡಿದ್ದು, ತಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನ ಸೇನೆಯಿಂದ ತರಬೇತಿ ಪಡೆದಿದ್ದೇನೆ ಎಂದು ಉಗ್ರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಸೋಮವಾರ ಸೇನೆ ನಡೆಸಿದ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆ ವೇಳೆ 19 ವರ್ಷದ ಉಗ್ರ ಶರಣಾಗಿದ್ದಾನೆ.

ಉರಿ ಸೆಕ್ಟರ್‌ನ ಸೇನಾ ಶಿಬಿರದಲ್ಲಿ ಮಾಧ್ಯಮಗಳೊಂದಿಗೆ ಪತ್ರಾ ಸಂವಹನ ನಡೆಸುತ್ತಿರುವುದು ವಿಡಿಯೊದಲ್ಲಿದೆ. ಬಾರಾಮುಲ್ಲಾ ಜಿಲ್ಲೆಯ ಪಟ್ಟಣಕ್ಕೆ ದಾಟಲು ಮತ್ತು ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ತಮ್ಮ ನಿರ್ವಾಹಕರು ₹ 20,000  ನೀಡಿದ್ದಾರೆ. ಇದಿಷ್ಟು ಹಣ ನೀಡಿದ ನಂತರ ಎರಡನೇ ಕಂತಿನಲ್ಲಿ ₹ 30,000 ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಪಾತ್ರ ಹೇಳಿದ್ದಾನೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PKO) ಮುಜಾಫರಾಬಾದ್‌ನಲ್ಲಿರುವ ಲಷ್ಕರ್ ಶಿಬಿರದಲ್ಲಿ ತಾನು ತರಬೇತಿ ಪಡೆದಿದ್ದೇನೆ ಮತ್ತು ಸೆಪ್ಟೆಂಬರ್ 18 ರಂದು ಆರು ಭಯೋತ್ಪಾದಕರ ಗುಂಪಿನೊಂದಿಗೆ ನುಸುಳಿದೆ ಎಂದು ಪತ್ರಾ ಹೇಳಿದ್ದಾನೆ.

ಇತ್ತೀಚಿನ ವರ್ಷಗಳಲ್ಲಿ ಸೇನೆಯು ಪಾಕಿಸ್ತಾನದ ಭಯೋತ್ಪಾದಕರನ್ನು ನಿಯಂತ್ರಣ ರೇಖೆ ಬಳಿ ಸೆರೆಹಿಡಿದ ಅಪರೂಪದ ಕಾರ್ಯಾಚರಣೆ ಇದಾಗಿದೆ. 2016 ರಲ್ಲಿ ಉರಿಯಲ್ಲಿ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಭಯೋತ್ಪಾದಕರು ದಾಟಿದ ಅದೇ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ತಡೆಯಲಾಗಿದೆ. ಉರಿ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗಿದ್ದರು.

ದಿನಗಳ ನಂತರ ಭಾರತವು ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳನ್ನು ನಾಶಮಾಡಲು ಗಡಿಯುದ್ದಕ್ಕೂ ಸರ್ಜಿಕಲ್ ಸ್ಟ್ರೈಕ್‌ಗಳನ್ನು ಆರಂಭಿಸಿತು.  ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳನ್ನು ಸಕ್ರಿಯಗೊಳಿಸಲಾಗಿದೆ ಮತ್ತು ಇತ್ತೀಚಿನ ಒಳನುಸುಳುವಿಕೆ ಪ್ರಯತ್ನಗಳು ಕಾಶ್ಮೀರದಲ್ಲಿ ದಾಳಿಗಳನ್ನು ನಡೆಸುವ ಗುರಿಯನ್ನು ಹೊಂದಿವೆ ಎಂದು ಸೇನೆಯು ಹೇಳಿದೆ.

ಇದನ್ನೂ ಓದಿ: ಉರಿ ವಲಯದಲ್ಲಿ ಉಗ್ರರ ನುಸುಳುವಿಕೆ ವಿಫಲಗೊಳಿಸಿದ ಭಾರತೀಯ ಸೇನೆ; ಕಾರ್ಯಾಚರಣೆಯ ವಿವರ ಬಿಚ್ಚಿಟ್ಟ ಅಧಿಕಾರಿಗಳು

ಇದನ್ನೂ ಓದಿ: ಉರಿ ಸೆಕ್ಟರ್​​ನಲ್ಲಿ ಒಳನುಸುಳುವಿಕೆ: ಸೇನಾಪಡೆಯಿಂದ ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬ ಸೆರೆ

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು