AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಸೈನ್ಯದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಖ್​, ಪಂಜಾಬ್​ ರೆಜಿಮೆಂಟ್​ ಯೋಧರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಜಾಗೃತಿ ಮೂಡಿಸುವ ಕೆಲಸ ಆರಂಭವಾಗಿದೆ.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 20, 2021 | 6:21 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಅದೆಷ್ಟೋ ಜನರು ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಕೆಲವು ಹಿರಿಯ, ನಿವೃತ್ತ ಸೈನಿಕರೂ ಸಹ ಸಮವಸ್ತ್ರದಲ್ಲೇ ಪಾಲ್ಗೊಂಡಿದ್ದು ವರದಿಯಾಗಿದೆ. ಈ ಹಿಂದೆ ಅಂಥ ಕೆಲವು ಫೊಟೋಗಳೂ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು. ಹೀಗೆ ಸೇನಾ ಯೂನಿಫಾರ್ಮ್ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವವರಿಗೆ ಭಾರತೀಯ ಸೇನೆ ಒಂದು ಎಚ್ಚರಿಕೆಯ ಪತ್ರ ಬರೆದಿದೆ.

ನೀವು ಮಾಜಿ ಯೋಧರೇ ಆಗಿದ್ದರೂ, ಯೋಧರಾಗಿದ್ದರೂ ಕೇವಲ ಸೇನೆಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ, ಕರ್ತವ್ಯದಲ್ಲಿ ಇದ್ದಾಗ ಮಾತ್ರ ಸೇನಾ ಸಮವಸ್ತ್ರ ಧರಿಸಬೇಕು. ಅದು ಬಿಟ್ಟು, ಸಾರ್ವಜನಿಕ ಸಮಾರಂಭಗಳಲ್ಲಿ, ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಯೂನಿಫಾರ್ಮ್​ ಅಥವಾ ನಿಮಗೆ ಬಂದ ಮೆಡಲ್​ಗಳನ್ನು ಎದೆ ಭಾಗದಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಕೇಂದ್ರೀಯ ಸೈನಿಕ ಮಂಡಳಿಗಳಿಗೆ ಸೇನೆ ಪತ್ರ ಬರೆದಿದೆ.

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಸೇನೆಯ ಸಿಖ್ ಮತ್ತು ಪಂಜಾಬ್​ ರೆಜಿಮೆಂಟ್​ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ತಿಳಿ ಹೇಳಲಾಗಿದೆ. ರಜೆಯ ಮೇಲೆ ಹೋದ ಕೆಲ ಸೇನಾ ಸಿಬ್ಬಂದಿ ಪ್ರತಿಭಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ‘ಯೂನಿಫಾರ್ಮ್​ ಧರಿಸಿ ಯಾರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತಿಲ್ಲ’ ಎಂದು ಸೇನೆ ಖಡಾಖಂಡಿತವಾಗಿ ಹೇಳಿದೆ.

ಪ್ರತಿಭಟನಾ ನಿರತ ರೈತರಿಗಾಗಿ ಇಸ್ತ್ರಿ ಸೇವೆ; ಬಟ್ಟೆ ಬೇಗ ಒಣಗಿಸಲು ನೆರವು

Published On - 6:07 pm, Wed, 20 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ