AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಸೈನ್ಯದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಖ್​, ಪಂಜಾಬ್​ ರೆಜಿಮೆಂಟ್​ ಯೋಧರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಜಾಗೃತಿ ಮೂಡಿಸುವ ಕೆಲಸ ಆರಂಭವಾಗಿದೆ.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 20, 2021 | 6:21 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಅದೆಷ್ಟೋ ಜನರು ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಕೆಲವು ಹಿರಿಯ, ನಿವೃತ್ತ ಸೈನಿಕರೂ ಸಹ ಸಮವಸ್ತ್ರದಲ್ಲೇ ಪಾಲ್ಗೊಂಡಿದ್ದು ವರದಿಯಾಗಿದೆ. ಈ ಹಿಂದೆ ಅಂಥ ಕೆಲವು ಫೊಟೋಗಳೂ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು. ಹೀಗೆ ಸೇನಾ ಯೂನಿಫಾರ್ಮ್ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವವರಿಗೆ ಭಾರತೀಯ ಸೇನೆ ಒಂದು ಎಚ್ಚರಿಕೆಯ ಪತ್ರ ಬರೆದಿದೆ.

ನೀವು ಮಾಜಿ ಯೋಧರೇ ಆಗಿದ್ದರೂ, ಯೋಧರಾಗಿದ್ದರೂ ಕೇವಲ ಸೇನೆಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ, ಕರ್ತವ್ಯದಲ್ಲಿ ಇದ್ದಾಗ ಮಾತ್ರ ಸೇನಾ ಸಮವಸ್ತ್ರ ಧರಿಸಬೇಕು. ಅದು ಬಿಟ್ಟು, ಸಾರ್ವಜನಿಕ ಸಮಾರಂಭಗಳಲ್ಲಿ, ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಯೂನಿಫಾರ್ಮ್​ ಅಥವಾ ನಿಮಗೆ ಬಂದ ಮೆಡಲ್​ಗಳನ್ನು ಎದೆ ಭಾಗದಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಕೇಂದ್ರೀಯ ಸೈನಿಕ ಮಂಡಳಿಗಳಿಗೆ ಸೇನೆ ಪತ್ರ ಬರೆದಿದೆ.

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಸೇನೆಯ ಸಿಖ್ ಮತ್ತು ಪಂಜಾಬ್​ ರೆಜಿಮೆಂಟ್​ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ತಿಳಿ ಹೇಳಲಾಗಿದೆ. ರಜೆಯ ಮೇಲೆ ಹೋದ ಕೆಲ ಸೇನಾ ಸಿಬ್ಬಂದಿ ಪ್ರತಿಭಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ‘ಯೂನಿಫಾರ್ಮ್​ ಧರಿಸಿ ಯಾರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತಿಲ್ಲ’ ಎಂದು ಸೇನೆ ಖಡಾಖಂಡಿತವಾಗಿ ಹೇಳಿದೆ.

ಪ್ರತಿಭಟನಾ ನಿರತ ರೈತರಿಗಾಗಿ ಇಸ್ತ್ರಿ ಸೇವೆ; ಬಟ್ಟೆ ಬೇಗ ಒಣಗಿಸಲು ನೆರವು

Published On - 6:07 pm, Wed, 20 January 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!