ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್‌ ಮೇಲೆ ಉಗ್ರರ ಹೊಂಚು ದಾಳಿ; 3 ಯೋಧರು ಹುತಾತ್ಮ, ಮೂವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಉಗ್ರರು ಹೊಂಚುದಾಳಿ ನಡೆಸಿದ್ದು ದಾಳಿ ಸಂಭವಿಸಿದ ಪ್ರದೇಶಕ್ಕೆ ಹೆಚ್ಚಿನ ಪ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಗುಂಡಿನ ದಾಳಿ ನಡೆಯುತ್ತಿದೆ

ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್‌ ಮೇಲೆ ಉಗ್ರರ ಹೊಂಚು ದಾಳಿ; 3 ಯೋಧರು ಹುತಾತ್ಮ, ಮೂವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ

Updated on: Dec 21, 2023 | 7:40 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch)ಜಿಲ್ಲೆಯಲ್ಲಿ ಇಂದು ಸೇನಾ ಟ್ರಕ್ ಮೇಲೆ ಉಗ್ರರು ಹೊಂಚು ದಾಳಿ ನಡೆಸಿದ್ದಾರೆ. ಒಂದು ತಿಂಗಳೊಳಗೆ ಈ ಪ್ರದೇಶದಲ್ಲಿ ಸೇನೆಯ ಮೇಲೆ ನಡೆದ ಎರಡನೇ ಭಯೋತ್ಪಾದಕ ದಾಳಿ ಇದಾಗಿದೆ. ಹೊಂಚುದಾಳಿ ಸಂಭವಿಸಿದ ಪ್ರದೇಶಕ್ಕೆ ಹೆಚ್ಚಿನ ಪಡೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಸಂಜೆ 7.20ಕ್ಕೆ ಸಿಕ್ಕಿದ ಮಾಹಿತಿ ಪ್ರಕಾರ ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು,ಮೂವರಿಗೆ ಗಾಯಗಳಾಗಿವೆ.

ಇಂದು ಮಧ್ಯಾಹ್ನ 3.45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಹಾದು ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದ ನಂತರ ಎನ್‌ಕೌಂಟರ್ ಆರಂಭವಾಯಿತು. ಆದಾಗ್ಯೂ, ಸೇನೆಯು ಗುರುವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
ಕಠಿಣ ಗುಪ್ತಚರ ಆಧಾರದ ಮೇಲೆ, ನಿನ್ನೆ ರಾತ್ರಿ ಡಿಕೆಜಿಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇಂದು ಸಂಜೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಮತ್ತು ಎನ್‌ಕೌಂಟರ್ ಪ್ರಗತಿಯಲ್ಲಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಪೂಂಚ್‌ನ ಸುರನ್‌ಕೋಟೆ ಪ್ರದೇಶದಲ್ಲಿ ಡಿಕೆಜಿ ಎಂದೂ ಕರೆಯಲ್ಪಡುವ ಡೇರಾ ಕಿ ಗಲಿಯಲ್ಲಿ ಉಗ್ರರು ಸೇನಾ ಟ್ರಕ್‌ಗೆ ಹೊಂಚು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು, ರಾಜೌರಿಯ ಕಲಾಕೋಟೆಯಲ್ಲಿ ಸೇನೆ ಮತ್ತು ಅದರ ವಿಶೇಷ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ 5 ಯೋಧರು ಹುತಾತ್ಮರಾಗಿದ್ದಾರೆ.


ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಯೂ ಇಲ್ಲಿ ನಡೆದಿದೆ.

ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜೌರಿ-ಪೂಂಚ್ ಪ್ರದೇಶದಲ್ಲಿ ಅವಳಿ ದಾಳಿಯಲ್ಲಿ 10 ಯೋಧರು ಹುತಾತ್ಮರಾಗಿದ್ದರು. ಈ ಪ್ರದೇಶವು 2003 ಮತ್ತು 2021 ರ ನಡುವೆ ಹೆಚ್ಚಾಗಿ ಭಯೋತ್ಪಾದನೆಯಿಂದ ಮುಕ್ತವಾಗಿತ್ತು, ನಂತರ ಆಗಾಗ್ಗೆ ಎನ್‌ಕೌಂಟರ್‌ಗಳು ಸಂಭವಿಸಲಾರಂಭಿಸಿದವು.

ಇದನ್ನೂ ಓದಿ:ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣ: ವಿಚಾರಣೆಗೆ ಹೆದರಿ ವಿಷ ಸೇವಿಸಿ ವ್ಯಕ್ತಿ ಸಾವು

ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Thu, 21 December 23

Loading...
Unable to load recommendations.
Follow Us