AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Violence: ಅಗ್ನಿಪಥ್ ಯೋಜನೆ, ನೂಪುರ್ ವಿರುದ್ಧ ಗಲಭೆ, 2 ಸಾವಿರ ಮಂದಿ ಬಂಧನ

ಉತ್ತರ ಪ್ರದೇಶದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ ಇದುವರೆಗೆ 1562 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿದ್ದು, ಆ ಗಲಭೆಯಲ್ಲಿ 424 ಮಂದಿಯನ್ನು ಬಂಧಿಸಲಾಗಿತ್ತು

Uttar Pradesh Violence: ಅಗ್ನಿಪಥ್ ಯೋಜನೆ, ನೂಪುರ್ ವಿರುದ್ಧ ಗಲಭೆ, 2 ಸಾವಿರ ಮಂದಿ ಬಂಧನ
Uttar Pradesh Violence
TV9 Web
| Edited By: |

Updated on:Jun 26, 2022 | 4:33 PM

Share

ಲಕ್ನೋ: ಉತ್ತರ ಪ್ರದೇಶದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ ಇದುವರೆಗೆ 1562 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿದ್ದು, ಆ ಗಲಭೆಯಲ್ಲಿ 424 ಮಂದಿಯನ್ನು ಬಂಧಿಸಲಾಗಿದೆ.

ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಶಾಂತ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಅಗ್ನಿಪಥ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ 1562 ಮಂದಿಯನ್ನು ಬಂಧಿಸಲಾಗಿದೆ. ಜಾನ್​ಪುರದಲ್ಲಿ 535 ಮಂದಿ , ಬಲ್ಲಿಯಾದಲ್ಲಿ 222 ಮಂದಿ, ಚಂದೌಲಿಯಲ್ಲಿ 210 ಮಂದಿ 29 ಜಿಲ್ಲೆಗಳಲ್ಲಿ ಒಟ್ಟು 82 ಪ್ರಕರಣಗಳನ್ನು ದಾಖಲಿಸಲಾಗಿದೆ.

ಜೂನ್ 17ರಂದು ಯುವಕರು ಅಗ್ನಿಪಥ್ ಯೋಜನೆಯ ವಿರುದ್ಧ ಬಲ್ಲಿಯಾ, ವಾರಾಣಸಿ, ಆಗ್ರಾ, ಅಲಿಗಢ ಸೇರಿ ಇತರೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಅಗ್ನಿಪಥ್ ಯೋಜನೆಯಡಿಯಲ್ಲಿ ನೇಮಕಗೊಳ್ಳುವ ಸೈನಿಕರನ್ನು ‘ಅಗ್ನಿವೀರ್‌ಗಳು’ ಎಂದು ಕರೆಯಲಾಗುತ್ತದೆ. ಹಲವಾರು ವಿರೋಧ ಪಕ್ಷಗಳು, ಮತ್ತು ಕೆಲವು ಮಿಲಿಟರಿ ಪರಿಣತರು ಈ ಯೋಜನೆಯನ್ನು ಟೀಕಿಸಿದ್ದಾರೆ.

ನೂಪುರ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 10 ಜಿಲ್ಲೆಗಳಿಂದ 424 ಮಂದಿಯನ್ನು ಬಂಧಿಸಲಾಗಿತ್ತು. ಕಾನ್ಪುರ್, ಫಿರೋಜಾಬಾದ್, ಅಲಿಗಢ, ಹತ್ರಾಸ್, ಮೊರಾದಾಬಾದ್, ಅಂಬೇಡ್ಕರ್​ ನಗರ, ಖೇರಿ, ಸಹರಾನ್​ಪುರ್ ಹಾಗೂ ಪ್ರಯಾಗ್​ರಾಜ್​ನ ಜನರನ್ನು ಬಂಧಿಸಲಾಗಿದೆ. ಈ ಕುರಿತು 20 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Published On - 4:31 pm, Sun, 26 June 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ