AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು ಎಂಬುದು ಬೆಳಕಿಗೆ ಬಂದಿದೆ.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 05, 2023 | 9:35 PM

Share

ಮಹಾರಾಷ್ಟ್ರ, ನ.05: ಕಳೆದ ಜುಲೈನಲ್ಲಿ ಪುಣೆ(Pune) ಬಳಿ‌ ಶಂಕಿತ ಐಸಿಸ್ ಉಗ್ರರ(ISIS Terrorist) ಬಂಧನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಹೌದು, ಪುಣೆಯಿಂದ ಕರ್ನಾಟಕಕ್ಕೂ ಶಂಕಿತರ ಲಿಂಕ್ ಬೆಸೆದಿದ್ದು, ಕರ್ನಾಟಕದಲ್ಲೂ‌ ಸಹ ಸ್ಫೋಟಕ್ಕೆ ಪ್ಲಾನ್ ಮಾಡಿದ್ದರೆಂದು ಎನ್​ಐಎ(NIA) ತನಿಖೆಯಿಂದ ಬಯಲಾಗಿದೆ.  ಈ ಹಿನ್ನಲೆ ರಾಷ್ಟ್ರೀಯ ತನಿಖಾ ತಂಡದಿಂದ 7 ಶಂಕಿತ ಉಗ್ರರ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಿದೆ.

ವಿವಿಧ ರಾಜ್ಯಗಳಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದ ಬಗ್ಗೆ ಉಲ್ಲೇಖ

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು. ಕಳೆದ ಜುಲೈನಲ್ಲಿ ಮಹಾರಾಷ್ಟ್ರ ಪೊಲೀಸರು ಪುಣೆ ಬಳಿ ಶಂಕಿತರನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್​ಐಎ ತನಿಖೆ ಪೂರ್ಣಗೊಳಿಸಿ ಮುಂಬೈ ಎನ್​ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ:Shivamogga police: ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, ಒಬ್ಬ ಪರಾರಿ

ಇನ್ನು ಜುಲೈ 18, 2023 ರಂದು ಪುಣೆ ಪೊಲೀಸರು ಮೋಟಾರ್ ಸೈಕಲ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವಾಗ ಇಬ್ಬರನ್ನು ಬಂಧಿಸಿದ್ದರು. ಈ ಘಟನೆಯಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಉಗ್ರರು ಎಂದು ತಿಳಿದುಬಂದಿದೆ. ಮುಹಮ್ಮದ್ ಇಮ್ರಾನ್, ಮುಹಮ್ಮದ್ ಯೂಸುಫ್ ಖಾನ್ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್ ಮತ್ತು ಮುಹಮ್ಮದ್ ಯೂನಸ್ ಮುಹಮ್ಮದ್ ಯಾಕೂಬ್ ಸಾಕಿ ಬಂಧಿತರು. ಆ ವೇಳೆ ಆತನ ಮೂರನೇ ಸಹಚರ ಮೊಹಮ್ಮದ್ ಶಹನವಾಜ್ ಆಲಂ ತಲೆಮರೆಸಿಕೊಂಡಿದ್ದ. ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ. ಅವರ ವಿಚಾರಣೆಯಿಂದ ಮಹತ್ವದ ಮಾಹಿತಿ ಸಿಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Sun, 5 November 23

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ