AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು ಎಂಬುದು ಬೆಳಕಿಗೆ ಬಂದಿದೆ.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​
ಪ್ರಾತಿನಿಧಿಕ ಚಿತ್ರ
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 05, 2023 | 9:35 PM

Share

ಮಹಾರಾಷ್ಟ್ರ, ನ.05: ಕಳೆದ ಜುಲೈನಲ್ಲಿ ಪುಣೆ(Pune) ಬಳಿ‌ ಶಂಕಿತ ಐಸಿಸ್ ಉಗ್ರರ(ISIS Terrorist) ಬಂಧನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಹೌದು, ಪುಣೆಯಿಂದ ಕರ್ನಾಟಕಕ್ಕೂ ಶಂಕಿತರ ಲಿಂಕ್ ಬೆಸೆದಿದ್ದು, ಕರ್ನಾಟಕದಲ್ಲೂ‌ ಸಹ ಸ್ಫೋಟಕ್ಕೆ ಪ್ಲಾನ್ ಮಾಡಿದ್ದರೆಂದು ಎನ್​ಐಎ(NIA) ತನಿಖೆಯಿಂದ ಬಯಲಾಗಿದೆ.  ಈ ಹಿನ್ನಲೆ ರಾಷ್ಟ್ರೀಯ ತನಿಖಾ ತಂಡದಿಂದ 7 ಶಂಕಿತ ಉಗ್ರರ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಿದೆ.

ವಿವಿಧ ರಾಜ್ಯಗಳಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದ ಬಗ್ಗೆ ಉಲ್ಲೇಖ

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು. ಕಳೆದ ಜುಲೈನಲ್ಲಿ ಮಹಾರಾಷ್ಟ್ರ ಪೊಲೀಸರು ಪುಣೆ ಬಳಿ ಶಂಕಿತರನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್​ಐಎ ತನಿಖೆ ಪೂರ್ಣಗೊಳಿಸಿ ಮುಂಬೈ ಎನ್​ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ:Shivamogga police: ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, ಒಬ್ಬ ಪರಾರಿ

ಇನ್ನು ಜುಲೈ 18, 2023 ರಂದು ಪುಣೆ ಪೊಲೀಸರು ಮೋಟಾರ್ ಸೈಕಲ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವಾಗ ಇಬ್ಬರನ್ನು ಬಂಧಿಸಿದ್ದರು. ಈ ಘಟನೆಯಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಉಗ್ರರು ಎಂದು ತಿಳಿದುಬಂದಿದೆ. ಮುಹಮ್ಮದ್ ಇಮ್ರಾನ್, ಮುಹಮ್ಮದ್ ಯೂಸುಫ್ ಖಾನ್ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್ ಮತ್ತು ಮುಹಮ್ಮದ್ ಯೂನಸ್ ಮುಹಮ್ಮದ್ ಯಾಕೂಬ್ ಸಾಕಿ ಬಂಧಿತರು. ಆ ವೇಳೆ ಆತನ ಮೂರನೇ ಸಹಚರ ಮೊಹಮ್ಮದ್ ಶಹನವಾಜ್ ಆಲಂ ತಲೆಮರೆಸಿಕೊಂಡಿದ್ದ. ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ. ಅವರ ವಿಚಾರಣೆಯಿಂದ ಮಹತ್ವದ ಮಾಹಿತಿ ಸಿಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Sun, 5 November 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ