AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು ಎಂಬುದು ಬೆಳಕಿಗೆ ಬಂದಿದೆ.

ಪುಣೆ ಬಳಿ‌ ಶಂಕಿತ ಐಸಿಸ್ ಉಗ್ರರ ಬಂಧನ ಕೇಸ್​; ಕರ್ನಾಟಕದಲ್ಲೂ‌ ಸ್ಫೋಟಕ್ಕೆ ಪ್ಲ್ಯಾನ್​
ಪ್ರಾತಿನಿಧಿಕ ಚಿತ್ರ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 05, 2023 | 9:35 PM

ಮಹಾರಾಷ್ಟ್ರ, ನ.05: ಕಳೆದ ಜುಲೈನಲ್ಲಿ ಪುಣೆ(Pune) ಬಳಿ‌ ಶಂಕಿತ ಐಸಿಸ್ ಉಗ್ರರ(ISIS Terrorist) ಬಂಧನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಹೌದು, ಪುಣೆಯಿಂದ ಕರ್ನಾಟಕಕ್ಕೂ ಶಂಕಿತರ ಲಿಂಕ್ ಬೆಸೆದಿದ್ದು, ಕರ್ನಾಟಕದಲ್ಲೂ‌ ಸಹ ಸ್ಫೋಟಕ್ಕೆ ಪ್ಲಾನ್ ಮಾಡಿದ್ದರೆಂದು ಎನ್​ಐಎ(NIA) ತನಿಖೆಯಿಂದ ಬಯಲಾಗಿದೆ.  ಈ ಹಿನ್ನಲೆ ರಾಷ್ಟ್ರೀಯ ತನಿಖಾ ತಂಡದಿಂದ 7 ಶಂಕಿತ ಉಗ್ರರ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಿದೆ.

ವಿವಿಧ ರಾಜ್ಯಗಳಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದ ಬಗ್ಗೆ ಉಲ್ಲೇಖ

ಎನ್​ಐಎ ಚಾರ್ಜ್ ಶೀಟ್​ನಲ್ಲಿ ಕರ್ನಾಟಕದಲ್ಲಿ ಸ್ಫೋಟಕ್ಕೆ ಸ್ಥಳ ಗುರ್ತಿಸಿದ್ದರ ಬಗ್ಗೆ ಉಲ್ಲೇಖವಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಹಾಗೂ ಇತರೆಡೆ ಪ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್ ಮಾಡಿ ಶಂಕಿತರು ಸ್ಪೋಟಕ್ಕೆ ಸಂಚು ಮಾಡಿದ್ದರು. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದರು. ಕಳೆದ ಜುಲೈನಲ್ಲಿ ಮಹಾರಾಷ್ಟ್ರ ಪೊಲೀಸರು ಪುಣೆ ಬಳಿ ಶಂಕಿತರನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್​ಐಎ ತನಿಖೆ ಪೂರ್ಣಗೊಳಿಸಿ ಮುಂಬೈ ಎನ್​ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ:Shivamogga police: ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, ಒಬ್ಬ ಪರಾರಿ

ಇನ್ನು ಜುಲೈ 18, 2023 ರಂದು ಪುಣೆ ಪೊಲೀಸರು ಮೋಟಾರ್ ಸೈಕಲ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವಾಗ ಇಬ್ಬರನ್ನು ಬಂಧಿಸಿದ್ದರು. ಈ ಘಟನೆಯಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಉಗ್ರರು ಎಂದು ತಿಳಿದುಬಂದಿದೆ. ಮುಹಮ್ಮದ್ ಇಮ್ರಾನ್, ಮುಹಮ್ಮದ್ ಯೂಸುಫ್ ಖಾನ್ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್ ಮತ್ತು ಮುಹಮ್ಮದ್ ಯೂನಸ್ ಮುಹಮ್ಮದ್ ಯಾಕೂಬ್ ಸಾಕಿ ಬಂಧಿತರು. ಆ ವೇಳೆ ಆತನ ಮೂರನೇ ಸಹಚರ ಮೊಹಮ್ಮದ್ ಶಹನವಾಜ್ ಆಲಂ ತಲೆಮರೆಸಿಕೊಂಡಿದ್ದ. ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ. ಅವರ ವಿಚಾರಣೆಯಿಂದ ಮಹತ್ವದ ಮಾಹಿತಿ ಸಿಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Sun, 5 November 23

ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್