AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji Resigns: ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ರಾಜೀನಾಮೆ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ರಾಜೀನಾಮೆ ನೀಡಿದ್ದಾರೆ. ಬಾಲಾಜಿ ಅವರು ಈ ಹಿಂದೆ ಸಾರಿಗೆ ಸಚಿವರಾಗಿದ್ದಾಗ ಚೆನ್ನೈನ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ದಾಖಲಿಸಿದ ಉದ್ಯೋಗಕ್ಕಾಗಿ ನಗದು ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕಳೆದ ವರ್ಷ ಜೂನ್ 14ರಂದು ಬಂಧಿಸಿತ್ತು.

Senthil Balaji Resigns: ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ರಾಜೀನಾಮೆ
ಸೆಂಥಿಲ್ ಬಾಲಾಜಿImage Credit source: Indian Express
ನಯನಾ ರಾಜೀವ್
|

Updated on: Feb 13, 2024 | 8:12 AM

Share

ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ( V Senthil Balaji) ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದ್ರಾಸ್ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಮುಂಚಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಲಾಜಿ ಅವರು ಈ ಹಿಂದೆ ಸಾರಿಗೆ ಸಚಿವರಾಗಿದ್ದಾಗ ಚೆನ್ನೈನ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ದಾಖಲಿಸಿದ ಉದ್ಯೋಗಕ್ಕಾಗಿ ನಗದು ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕಳೆದ ವರ್ಷ ಜೂನ್ 14ರಂದು ಬಂಧಿಸಿತ್ತು.

ಪ್ರಕರಣವನ್ನು ಎದುರಿಸುತ್ತಿದ್ದರೂ ಸಂಪುಟದಲ್ಲಿ ಉಳಿಸಿಕೊಂಡಿರುವುದಕ್ಕೆ ಮದ್ರಾಸ್ ಹೈಕೋರ್ಟ್​ ಸ್ಟಾಲಿನ್ ಸರ್ಕಾರಕ್ಕೆ ಛಾಟಿ ಬೀಸಿತ್ತು. ಅದಾದ ಬಳಿಕ ಖಾತೆ ಇಲ್ಲದೆ ಸಚಿವ ಸ್ಥಾನವನ್ನು ಹಾಗೆಯೇ ಉಳಿಸಲಾಗಿತ್ತು. ಗಂಟೆಗಳ ವಿಚಾರಣೆಯ ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು ಮತ್ತು ಎದೆನೋವು ಎಂದು ದೂರಿದ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರು 2011 ಮತ್ತು 2015 ರ ನಡುವೆ ರಾಜ್ಯ ಸಾರಿಗೆ ಇಲಾಖೆಯಲ್ಲಿ ಕೆಲಸ ಅರಸಿ ಬಂದ ಜನರಿಂದ ಲಂಚ ಪಡೆದ ಆರೋಪಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಅವರನ್ನು ಜೂನ್ 28ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಮತ್ತಷ್ಟು ಓದಿ: Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ಕಳೆದ ವರ್ಷ ಆಗಸ್ಟ್‌ನಲ್ಲಿ ಸೆಂಥಿಲ್ ಬಾಲಾಜಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿತ್ತು. 3000 ಪುಟಗಳ ಈ ಚಾರ್ಜ್ ಶೀಟ್ ನ ಪ್ರತಿಯನ್ನು ಸೆಂಥಿಲ್ ಬಾಲಾಜಿಗೆ ನೀಡಲಾಗಿದೆ. ಸೆಂಥಿಲ್ ಬಾಲಾಜಿಗೆ 19ನೇ ಬಾರಿಗೆ ಕೋರ್ಟ್ ಕಸ್ಟಡಿಯನ್ನು ವಿಸ್ತರಿಸಲಾಗಿದೆ.

ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್‌ನಲ್ಲಿ ದಾಖಲಾಗಿರುವ 3 ಪ್ರಕರಣಗಳ ತನಿಖೆ ಪೂರ್ಣಗೊಳ್ಳುವವರೆಗೆ ಜಾರಿ ಇಲಾಖೆಯ ತನಿಖೆಯನ್ನು ಮುಂದೂಡುವಂತೆ ಸೆಂಥಿಲ್ ಬಾಲಾಜಿ ಸಲ್ಲಿಸಿರುವ ಪ್ರಕರಣದ ತೀರ್ಪು ಫೆಬ್ರವರಿ 15 ರಂದು ನೀಡುವುದಾಗಿ ಪ್ರಧಾನ ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಸೆಂಥಿಲ್ ಬಾಲಾಜಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೆಂಥಿಲ್ ಬಾಲಾಜಿ ಪುಝಲ್ ಜೈಲಿನಲ್ಲಿರುವಾಗ, ಅವರ ಜಾಮೀನು ಅರ್ಜಿಗಳನ್ನು ಒಂದರ ನಂತರ ಒಂದರಂತೆ ವಜಾಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್