AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ

ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ ಮಾಡಿದ ನಂತರ ಇಡಿ ಬಂಧಿಸಿತ್ತು

ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ
ಅರ್ಪಿತಾ ಮುಖರ್ಜಿ
TV9 Web
| Edited By: |

Updated on:Jul 24, 2022 | 8:45 PM

Share

ಬಂಧಿತರಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರನ್ನು ಜುಲೈ 24 ರಂದು ನಗರ ನ್ಯಾಯಾಲಯವು ಒಂದು ದಿನಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ಒಪ್ಪಿಸಿದೆ. ಅರ್ಪಿತಾ  ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ  ಮಾಡಿದ ನಂತರ ಇಡಿ ಬಂಧಿಸಿತ್ತು. ಅಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೇಂದ್ರ ಏಜೆನ್ಸಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಉಸ್ತುವಾರಿ, ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಮ್ರತಾ ಸಿಂಗ್ ಅವರು ಜುಲೈ 25 ರಂದು ಇಡಿ ನ್ಯಾಯಾಲಯಕ್ಕೆ ಅರ್ಪಿತಾ ಮುಖರ್ಜಿಯನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ. ಅಭಿಜಿತ್ ಭದ್ರಾ ಸೇರಿದಂತೆ ಇಡಿ ವಕೀಲರು  ಮುಖರ್ಜಿಯ 14 ದಿನಗಳ ಕಸ್ಟಡಿಗೆ ಮನವಿ ಮಾಡಿದ್ದರು. ಪಶ್ಚಿಮ ಬಂಗಾಳದ  ಕೈಗಾರಿಕೆ ಮತ್ತು ವಾಣಿಜ್ಯ ಸಚಿವರು ಆಗಿರುವ ಪಾರ್ಥ ಚಟರ್ಜಿ  ಅವರನ್ನು ಶಿಕ್ಷಕರ ನೇಮಕಾತಿ ಹಗರಣ (school jobs scam) ಆರೋಪದಲ್ಲಿ ಜುಲೈ 23ರಂದು ಬಂಧಿಸಿತ್ತು.

ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತನಿಖೆಯ ಭಾಗವಾಗಿ ಇಡಿ ಸಿಬ್ಬಂದಿ ಜುಲೈ 22 ರಂದು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

Published On - 8:37 pm, Sun, 24 July 22

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ