AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ

ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ ಮಾಡಿದ ನಂತರ ಇಡಿ ಬಂಧಿಸಿತ್ತು

ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ
ಅರ್ಪಿತಾ ಮುಖರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 24, 2022 | 8:45 PM

Share

ಬಂಧಿತರಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರನ್ನು ಜುಲೈ 24 ರಂದು ನಗರ ನ್ಯಾಯಾಲಯವು ಒಂದು ದಿನಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ಒಪ್ಪಿಸಿದೆ. ಅರ್ಪಿತಾ  ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ  ಮಾಡಿದ ನಂತರ ಇಡಿ ಬಂಧಿಸಿತ್ತು. ಅಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೇಂದ್ರ ಏಜೆನ್ಸಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಉಸ್ತುವಾರಿ, ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಮ್ರತಾ ಸಿಂಗ್ ಅವರು ಜುಲೈ 25 ರಂದು ಇಡಿ ನ್ಯಾಯಾಲಯಕ್ಕೆ ಅರ್ಪಿತಾ ಮುಖರ್ಜಿಯನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ. ಅಭಿಜಿತ್ ಭದ್ರಾ ಸೇರಿದಂತೆ ಇಡಿ ವಕೀಲರು  ಮುಖರ್ಜಿಯ 14 ದಿನಗಳ ಕಸ್ಟಡಿಗೆ ಮನವಿ ಮಾಡಿದ್ದರು. ಪಶ್ಚಿಮ ಬಂಗಾಳದ  ಕೈಗಾರಿಕೆ ಮತ್ತು ವಾಣಿಜ್ಯ ಸಚಿವರು ಆಗಿರುವ ಪಾರ್ಥ ಚಟರ್ಜಿ  ಅವರನ್ನು ಶಿಕ್ಷಕರ ನೇಮಕಾತಿ ಹಗರಣ (school jobs scam) ಆರೋಪದಲ್ಲಿ ಜುಲೈ 23ರಂದು ಬಂಧಿಸಿತ್ತು.

ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತನಿಖೆಯ ಭಾಗವಾಗಿ ಇಡಿ ಸಿಬ್ಬಂದಿ ಜುಲೈ 22 ರಂದು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

Published On - 8:37 pm, Sun, 24 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ