Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು […]

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ
ರಾಜ್​ದೀಪ್​ ಸರ್​ದೇಸಾಯಿ
Follow us
ರಾಜೇಶ್ ದುಗ್ಗುಮನೆ
|

Updated on: Jan 27, 2021 | 8:14 PM

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ರೈತನ ಸಾವಿಗೆ ಕಾರಣವಾಗಿತ್ತು.

ಟ್ರ್ಯಾಕ್ಟರ್​ ಮಗುಚಿ ಬಿದ್ದು, ರೈತ ಮೃತಪಟ್ಟಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಡಿಲೀಡ್​ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಇಂದು ArrestRajdeep ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅನೇಕರು ರಾಜ್​ದೀಪ್​ ಸರ್​ದೇಸಾಯಿ ಸುಳ್ಳು ಸುದ್ದಿಯ ಸರದಾರ ಎಂದು ಆರೋಪಿಸಿದ್ದಾರೆ.

https://twitter.com/Arunav7/status/1354314779595321344/photo/1

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಬದುಕಿದ್ದಾಗಲೇ, ಅವರು ನಿಧನ ಹೊಂದಿದ್ದಾರೆ ಎಂದು ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಮಾಡಿದ್ದರು. ನಂತರ ಈ ಬಗ್ಗೆ ಕ್ಷಮೆ ಯಾಚಿಸಿದ್ದರು.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್