ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು […]

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ
ರಾಜ್​ದೀಪ್​ ಸರ್​ದೇಸಾಯಿ

Updated on: Jan 27, 2021 | 8:14 PM

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ರೈತನ ಸಾವಿಗೆ ಕಾರಣವಾಗಿತ್ತು.

ಟ್ರ್ಯಾಕ್ಟರ್​ ಮಗುಚಿ ಬಿದ್ದು, ರೈತ ಮೃತಪಟ್ಟಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಡಿಲೀಡ್​ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಇಂದು ArrestRajdeep ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅನೇಕರು ರಾಜ್​ದೀಪ್​ ಸರ್​ದೇಸಾಯಿ ಸುಳ್ಳು ಸುದ್ದಿಯ ಸರದಾರ ಎಂದು ಆರೋಪಿಸಿದ್ದಾರೆ.

https://twitter.com/Arunav7/status/1354314779595321344/photo/1

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಬದುಕಿದ್ದಾಗಲೇ, ಅವರು ನಿಧನ ಹೊಂದಿದ್ದಾರೆ ಎಂದು ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಮಾಡಿದ್ದರು. ನಂತರ ಈ ಬಗ್ಗೆ ಕ್ಷಮೆ ಯಾಚಿಸಿದ್ದರು.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us