AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ

ಯುವಕನೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಯುವತಿಗೆ ಮೋಸಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಷದ್ ಎಂಬ ಯುವಕ ತನ್ನ ಹೆಸರನ್ನು ಹರ್ಷ ಎಂದು ಬದಲಾಯಿಸಿಕೊಂಡು ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ, ಆಗ ಆಕೆಯೂ ಒಪ್ಪಿಕೊಂಡಿದ್ದಾಳೆ, ಆದರೆ ಬಳಿಕ ಆತನ ವರ್ತನೆಯಿಂದ ಅನುಮಾನ ಬಂದು ಬಜರಂಗದಳದವರಿಗೆ ಕರೆ ಮಾಡಿದ್ದಾಳೆ. ಬಳಿಕ ಅವರು ಬಂದು ವಿಚಾರಿಸುವಾಗ ಆತ ಅನ್ಯ ಸಮುದಾಯದವನು ಎಂಬುದು ತಿಳಿದುಬಂದಿದೆ.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ
ಅರ್ಷದ್Image Credit source: TV9 Bharatvarsh
ನಯನಾ ರಾಜೀವ್
|

Updated on: Feb 14, 2024 | 12:57 PM

Share

ತನ್ನ ನಿಜವಾದ ಗುರುತನ್ನು ಮರೆಮಾಚಿ ಹರ್ಷ ಎಂಬ ಹೆಸರಿನಲ್ಲಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನನ್ನು ಹರ್ಷ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ, ಆಕೆಗೆ ಪ್ರೇಮ ನಿವೇದನೆ ಮಾಡುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಬಂದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂದೋರ್‌ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯ ಸಮುದಾಯದ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿದ್ದ ಆಕೆಗೆ ಪ್ರೇಮ ನಿವೇದನೆ ಮಾಡಲು ಅಲ್ಲಿಗೆ ಬಂದಿದ್ದ, ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದೆ.

ಹುಡುಗಿ ಬಳಿ ತನ್ನ ಹೆಸರು ಹರ್ಷ ಎಂದು ಆತ ಹೇಳಿದ್ದ, ಆರೋಪಿಯ ಪ್ರೇಮ ನಿವೇದನೆಯನ್ನು ಆಕೆ ಒಪ್ಪಿಕೊಂಡಿದ್ದಳು, ಬಳಿಕ ಆಕೆಯ ಮನೆಗೂ ಆತ ಬಂದಿದ್ದ ಎನ್ನಲಾಗಿದೆ. ಆಕೆಯ ಬಳಿ ಬಾ ವಾಕಿಂಗ್​ಗೆ ಹೋಗೋಣ ಎಂದು ಪದೇ ಪದೇ ಹೇಳುತ್ತಿದ್ದ, ಬಳಿಕ ಆತನ ವರ್ತನೆ ಸ್ವಲ್ಪ ಬದಲಾಗಿತ್ತು, ಅನುಮಾನಗೊಂಡ ಯುವತಿ ಬಜರಂಗದಳಕ್ಕೆ ವಿಷಯ ಮುಟ್ಟಿಸಿದ್ದಾರೆ. ಆರೋಪಿಯ ಬಳಿ ಆಧಾರ್ ಕಾರ್ಡ್​ ತೋರಿಸುವಂತೆ ಕೇಳಿಕೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: Memorable Love Proposal: ಗೆಳತಿಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದ ಯುವಕ

ಆರೋಪಿಯ ಹೆಸರು ಅರ್ಷದ್ ಮತ್ತು ಆತನ ತಂದೆಯ ಹೆಸರು ಸಲೀಂ ಎಂದು ತಿಳಿದುಬಂದಿದೆ. ಇದಾದ ನಂತರ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿ ನಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

ಸಂತ್ರಸ್ತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರುಕುಳ ಮತ್ತು ಲವ್ ಜಿಹಾದ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ