AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ

ಯುವಕನೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಯುವತಿಗೆ ಮೋಸಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಷದ್ ಎಂಬ ಯುವಕ ತನ್ನ ಹೆಸರನ್ನು ಹರ್ಷ ಎಂದು ಬದಲಾಯಿಸಿಕೊಂಡು ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ, ಆಗ ಆಕೆಯೂ ಒಪ್ಪಿಕೊಂಡಿದ್ದಾಳೆ, ಆದರೆ ಬಳಿಕ ಆತನ ವರ್ತನೆಯಿಂದ ಅನುಮಾನ ಬಂದು ಬಜರಂಗದಳದವರಿಗೆ ಕರೆ ಮಾಡಿದ್ದಾಳೆ. ಬಳಿಕ ಅವರು ಬಂದು ವಿಚಾರಿಸುವಾಗ ಆತ ಅನ್ಯ ಸಮುದಾಯದವನು ಎಂಬುದು ತಿಳಿದುಬಂದಿದೆ.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ
ಅರ್ಷದ್Image Credit source: TV9 Bharatvarsh
ನಯನಾ ರಾಜೀವ್
|

Updated on: Feb 14, 2024 | 12:57 PM

Share

ತನ್ನ ನಿಜವಾದ ಗುರುತನ್ನು ಮರೆಮಾಚಿ ಹರ್ಷ ಎಂಬ ಹೆಸರಿನಲ್ಲಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನನ್ನು ಹರ್ಷ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ, ಆಕೆಗೆ ಪ್ರೇಮ ನಿವೇದನೆ ಮಾಡುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಬಂದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂದೋರ್‌ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯ ಸಮುದಾಯದ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿದ್ದ ಆಕೆಗೆ ಪ್ರೇಮ ನಿವೇದನೆ ಮಾಡಲು ಅಲ್ಲಿಗೆ ಬಂದಿದ್ದ, ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದೆ.

ಹುಡುಗಿ ಬಳಿ ತನ್ನ ಹೆಸರು ಹರ್ಷ ಎಂದು ಆತ ಹೇಳಿದ್ದ, ಆರೋಪಿಯ ಪ್ರೇಮ ನಿವೇದನೆಯನ್ನು ಆಕೆ ಒಪ್ಪಿಕೊಂಡಿದ್ದಳು, ಬಳಿಕ ಆಕೆಯ ಮನೆಗೂ ಆತ ಬಂದಿದ್ದ ಎನ್ನಲಾಗಿದೆ. ಆಕೆಯ ಬಳಿ ಬಾ ವಾಕಿಂಗ್​ಗೆ ಹೋಗೋಣ ಎಂದು ಪದೇ ಪದೇ ಹೇಳುತ್ತಿದ್ದ, ಬಳಿಕ ಆತನ ವರ್ತನೆ ಸ್ವಲ್ಪ ಬದಲಾಗಿತ್ತು, ಅನುಮಾನಗೊಂಡ ಯುವತಿ ಬಜರಂಗದಳಕ್ಕೆ ವಿಷಯ ಮುಟ್ಟಿಸಿದ್ದಾರೆ. ಆರೋಪಿಯ ಬಳಿ ಆಧಾರ್ ಕಾರ್ಡ್​ ತೋರಿಸುವಂತೆ ಕೇಳಿಕೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: Memorable Love Proposal: ಗೆಳತಿಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದ ಯುವಕ

ಆರೋಪಿಯ ಹೆಸರು ಅರ್ಷದ್ ಮತ್ತು ಆತನ ತಂದೆಯ ಹೆಸರು ಸಲೀಂ ಎಂದು ತಿಳಿದುಬಂದಿದೆ. ಇದಾದ ನಂತರ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿ ನಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

ಸಂತ್ರಸ್ತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರುಕುಳ ಮತ್ತು ಲವ್ ಜಿಹಾದ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್