AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ

ಯುವಕನೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಯುವತಿಗೆ ಮೋಸಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಷದ್ ಎಂಬ ಯುವಕ ತನ್ನ ಹೆಸರನ್ನು ಹರ್ಷ ಎಂದು ಬದಲಾಯಿಸಿಕೊಂಡು ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ, ಆಗ ಆಕೆಯೂ ಒಪ್ಪಿಕೊಂಡಿದ್ದಾಳೆ, ಆದರೆ ಬಳಿಕ ಆತನ ವರ್ತನೆಯಿಂದ ಅನುಮಾನ ಬಂದು ಬಜರಂಗದಳದವರಿಗೆ ಕರೆ ಮಾಡಿದ್ದಾಳೆ. ಬಳಿಕ ಅವರು ಬಂದು ವಿಚಾರಿಸುವಾಗ ಆತ ಅನ್ಯ ಸಮುದಾಯದವನು ಎಂಬುದು ತಿಳಿದುಬಂದಿದೆ.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ
ಅರ್ಷದ್Image Credit source: TV9 Bharatvarsh
ನಯನಾ ರಾಜೀವ್
|

Updated on: Feb 14, 2024 | 12:57 PM

Share

ತನ್ನ ನಿಜವಾದ ಗುರುತನ್ನು ಮರೆಮಾಚಿ ಹರ್ಷ ಎಂಬ ಹೆಸರಿನಲ್ಲಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನನ್ನು ಹರ್ಷ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ, ಆಕೆಗೆ ಪ್ರೇಮ ನಿವೇದನೆ ಮಾಡುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಬಂದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂದೋರ್‌ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯ ಸಮುದಾಯದ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿದ್ದ ಆಕೆಗೆ ಪ್ರೇಮ ನಿವೇದನೆ ಮಾಡಲು ಅಲ್ಲಿಗೆ ಬಂದಿದ್ದ, ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದೆ.

ಹುಡುಗಿ ಬಳಿ ತನ್ನ ಹೆಸರು ಹರ್ಷ ಎಂದು ಆತ ಹೇಳಿದ್ದ, ಆರೋಪಿಯ ಪ್ರೇಮ ನಿವೇದನೆಯನ್ನು ಆಕೆ ಒಪ್ಪಿಕೊಂಡಿದ್ದಳು, ಬಳಿಕ ಆಕೆಯ ಮನೆಗೂ ಆತ ಬಂದಿದ್ದ ಎನ್ನಲಾಗಿದೆ. ಆಕೆಯ ಬಳಿ ಬಾ ವಾಕಿಂಗ್​ಗೆ ಹೋಗೋಣ ಎಂದು ಪದೇ ಪದೇ ಹೇಳುತ್ತಿದ್ದ, ಬಳಿಕ ಆತನ ವರ್ತನೆ ಸ್ವಲ್ಪ ಬದಲಾಗಿತ್ತು, ಅನುಮಾನಗೊಂಡ ಯುವತಿ ಬಜರಂಗದಳಕ್ಕೆ ವಿಷಯ ಮುಟ್ಟಿಸಿದ್ದಾರೆ. ಆರೋಪಿಯ ಬಳಿ ಆಧಾರ್ ಕಾರ್ಡ್​ ತೋರಿಸುವಂತೆ ಕೇಳಿಕೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: Memorable Love Proposal: ಗೆಳತಿಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದ ಯುವಕ

ಆರೋಪಿಯ ಹೆಸರು ಅರ್ಷದ್ ಮತ್ತು ಆತನ ತಂದೆಯ ಹೆಸರು ಸಲೀಂ ಎಂದು ತಿಳಿದುಬಂದಿದೆ. ಇದಾದ ನಂತರ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿ ನಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

ಸಂತ್ರಸ್ತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರುಕುಳ ಮತ್ತು ಲವ್ ಜಿಹಾದ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ