AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ

ಯುವಕನೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಯುವತಿಗೆ ಮೋಸಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಷದ್ ಎಂಬ ಯುವಕ ತನ್ನ ಹೆಸರನ್ನು ಹರ್ಷ ಎಂದು ಬದಲಾಯಿಸಿಕೊಂಡು ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ, ಆಗ ಆಕೆಯೂ ಒಪ್ಪಿಕೊಂಡಿದ್ದಾಳೆ, ಆದರೆ ಬಳಿಕ ಆತನ ವರ್ತನೆಯಿಂದ ಅನುಮಾನ ಬಂದು ಬಜರಂಗದಳದವರಿಗೆ ಕರೆ ಮಾಡಿದ್ದಾಳೆ. ಬಳಿಕ ಅವರು ಬಂದು ವಿಚಾರಿಸುವಾಗ ಆತ ಅನ್ಯ ಸಮುದಾಯದವನು ಎಂಬುದು ತಿಳಿದುಬಂದಿದೆ.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ
ಅರ್ಷದ್Image Credit source: TV9 Bharatvarsh
ನಯನಾ ರಾಜೀವ್
|

Updated on: Feb 14, 2024 | 12:57 PM

Share

ತನ್ನ ನಿಜವಾದ ಗುರುತನ್ನು ಮರೆಮಾಚಿ ಹರ್ಷ ಎಂಬ ಹೆಸರಿನಲ್ಲಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನನ್ನು ಹರ್ಷ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ, ಆಕೆಗೆ ಪ್ರೇಮ ನಿವೇದನೆ ಮಾಡುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಬಂದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂದೋರ್‌ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯ ಸಮುದಾಯದ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿದ್ದ ಆಕೆಗೆ ಪ್ರೇಮ ನಿವೇದನೆ ಮಾಡಲು ಅಲ್ಲಿಗೆ ಬಂದಿದ್ದ, ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದೆ.

ಹುಡುಗಿ ಬಳಿ ತನ್ನ ಹೆಸರು ಹರ್ಷ ಎಂದು ಆತ ಹೇಳಿದ್ದ, ಆರೋಪಿಯ ಪ್ರೇಮ ನಿವೇದನೆಯನ್ನು ಆಕೆ ಒಪ್ಪಿಕೊಂಡಿದ್ದಳು, ಬಳಿಕ ಆಕೆಯ ಮನೆಗೂ ಆತ ಬಂದಿದ್ದ ಎನ್ನಲಾಗಿದೆ. ಆಕೆಯ ಬಳಿ ಬಾ ವಾಕಿಂಗ್​ಗೆ ಹೋಗೋಣ ಎಂದು ಪದೇ ಪದೇ ಹೇಳುತ್ತಿದ್ದ, ಬಳಿಕ ಆತನ ವರ್ತನೆ ಸ್ವಲ್ಪ ಬದಲಾಗಿತ್ತು, ಅನುಮಾನಗೊಂಡ ಯುವತಿ ಬಜರಂಗದಳಕ್ಕೆ ವಿಷಯ ಮುಟ್ಟಿಸಿದ್ದಾರೆ. ಆರೋಪಿಯ ಬಳಿ ಆಧಾರ್ ಕಾರ್ಡ್​ ತೋರಿಸುವಂತೆ ಕೇಳಿಕೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: Memorable Love Proposal: ಗೆಳತಿಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದ ಯುವಕ

ಆರೋಪಿಯ ಹೆಸರು ಅರ್ಷದ್ ಮತ್ತು ಆತನ ತಂದೆಯ ಹೆಸರು ಸಲೀಂ ಎಂದು ತಿಳಿದುಬಂದಿದೆ. ಇದಾದ ನಂತರ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿ ನಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

ಸಂತ್ರಸ್ತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರುಕುಳ ಮತ್ತು ಲವ್ ಜಿಹಾದ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ