ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ

ಯುವಕನೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಯುವತಿಗೆ ಮೋಸಮಾಡಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಷದ್ ಎಂಬ ಯುವಕ ತನ್ನ ಹೆಸರನ್ನು ಹರ್ಷ ಎಂದು ಬದಲಾಯಿಸಿಕೊಂಡು ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ, ಆಗ ಆಕೆಯೂ ಒಪ್ಪಿಕೊಂಡಿದ್ದಾಳೆ, ಆದರೆ ಬಳಿಕ ಆತನ ವರ್ತನೆಯಿಂದ ಅನುಮಾನ ಬಂದು ಬಜರಂಗದಳದವರಿಗೆ ಕರೆ ಮಾಡಿದ್ದಾಳೆ. ಬಳಿಕ ಅವರು ಬಂದು ವಿಚಾರಿಸುವಾಗ ಆತ ಅನ್ಯ ಸಮುದಾಯದವನು ಎಂಬುದು ತಿಳಿದುಬಂದಿದೆ.

ಹರ್ಷ ಎಂದು ಹೆಸರು ಬದಲಿಸಿಕೊಂಡು ಯುವತಿಗೆ ಪ್ರಪೋಸ್ ಮಾಡಿದ್ದ ಅರ್ಷದ್, ಆಮೇಲೇನಾಯ್ತು, ಇಲ್ಲಿದೆ ಮಾಹಿತಿ
ಅರ್ಷದ್Image Credit source: TV9 Bharatvarsh
Follow us
|

Updated on: Feb 14, 2024 | 12:57 PM

ತನ್ನ ನಿಜವಾದ ಗುರುತನ್ನು ಮರೆಮಾಚಿ ಹರ್ಷ ಎಂಬ ಹೆಸರಿನಲ್ಲಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನನ್ನು ಹರ್ಷ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ, ಆಕೆಗೆ ಪ್ರೇಮ ನಿವೇದನೆ ಮಾಡುವ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಬಂದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂದೋರ್‌ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯ ಸಮುದಾಯದ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿದ್ದ ಆಕೆಗೆ ಪ್ರೇಮ ನಿವೇದನೆ ಮಾಡಲು ಅಲ್ಲಿಗೆ ಬಂದಿದ್ದ, ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದೆ.

ಹುಡುಗಿ ಬಳಿ ತನ್ನ ಹೆಸರು ಹರ್ಷ ಎಂದು ಆತ ಹೇಳಿದ್ದ, ಆರೋಪಿಯ ಪ್ರೇಮ ನಿವೇದನೆಯನ್ನು ಆಕೆ ಒಪ್ಪಿಕೊಂಡಿದ್ದಳು, ಬಳಿಕ ಆಕೆಯ ಮನೆಗೂ ಆತ ಬಂದಿದ್ದ ಎನ್ನಲಾಗಿದೆ. ಆಕೆಯ ಬಳಿ ಬಾ ವಾಕಿಂಗ್​ಗೆ ಹೋಗೋಣ ಎಂದು ಪದೇ ಪದೇ ಹೇಳುತ್ತಿದ್ದ, ಬಳಿಕ ಆತನ ವರ್ತನೆ ಸ್ವಲ್ಪ ಬದಲಾಗಿತ್ತು, ಅನುಮಾನಗೊಂಡ ಯುವತಿ ಬಜರಂಗದಳಕ್ಕೆ ವಿಷಯ ಮುಟ್ಟಿಸಿದ್ದಾರೆ. ಆರೋಪಿಯ ಬಳಿ ಆಧಾರ್ ಕಾರ್ಡ್​ ತೋರಿಸುವಂತೆ ಕೇಳಿಕೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: Memorable Love Proposal: ಗೆಳತಿಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದ ಯುವಕ

ಆರೋಪಿಯ ಹೆಸರು ಅರ್ಷದ್ ಮತ್ತು ಆತನ ತಂದೆಯ ಹೆಸರು ಸಲೀಂ ಎಂದು ತಿಳಿದುಬಂದಿದೆ. ಇದಾದ ನಂತರ ಪೊಲೀಸರು ಆತನಿಗೆ ತೀವ್ರವಾಗಿ ಥಳಿಸಿ ನಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

ಸಂತ್ರಸ್ತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರುಕುಳ ಮತ್ತು ಲವ್ ಜಿಹಾದ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು