AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾಗಾಂಧಿ ಸ್ವರ್ಗದಿಂದ ಇಳಿದು ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ; ಅಮಿತ್ ಶಾ

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಕರೆ ನೀಡುವ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರದ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅದು ಎಂದಿಗೂ ಸಾಧ್ಯವಿಲ್ಲ ಎಂದು ದೃಢವಾಗಿ ಪ್ರತಿಪಾದಿಸಿದ್ದಾರೆ.

ಇಂದಿರಾಗಾಂಧಿ ಸ್ವರ್ಗದಿಂದ ಇಳಿದು ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ; ಅಮಿತ್ ಶಾ
ಅಮಿತ್ ಶಾ
ಸುಷ್ಮಾ ಚಕ್ರೆ
|

Updated on: Nov 13, 2024 | 8:31 PM

Share

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರವು ಈ ಹಿಂದೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದಕ್ಕೆ ಖಂಡನೆ ವ್ಯಕ್ತಪಡಿಸಿದೆ. 370ನೇ ವಿಧಿಯನ್ನು ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದ ಕೆಲವೇ ದಿನಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂದಿರಾ ಗಾಂಧಿಯೇ ಸ್ವರ್ಗದಿಂದ ಕೆಳಗಿಳಿದು ಬಂದರೂ ಈ 370ನೇ ವಿಧಿಯನ್ನು ಯಾವುದೇ ಕಾರಣಕ್ಕೂ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, “ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಶ್ರೀನಗರದ ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ನನಗೆ ಭಯವಾಯಿತು ಎಂಬ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಶೀಲ್‌ಕುಮಾರ್ ಶಿಂಧೆ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, “ಶಿಂಧೆಯವರೇ, ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಹೋಗಿ, ನಿಮಗೆ ಯಾವುದೇ ತೊಂದರೆಯಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸಿಐಎಸ್​ಎಫ್​ನ ಮೊದಲ ಸಂಪೂರ್ಣ ಮಹಿಳಾ ಬೆಟಾಲಿಯನ್ ರಚನೆಗೆ ಸರ್ಕಾರ ಅನುಮೋದನೆ; ಅಮಿತ್ ಶಾ ಘೋಷಣೆ

“ಸೋನಿಯಾ ಗಾಂಧಿ -ಮನಮೋಹನ್ ಸಿಂಗ್ ಆಡಳಿತದ 10 ವರ್ಷಗಳ ಅವಧಿಯಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟಗಳನ್ನು ಪ್ರಚೋದಿಸುತ್ತಿದ್ದರು” ಎಂದು ಅಮಿತ್ ಶಾ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಮತ್ತೊಂದು ರ್ಯಾಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು. ಅಲ್ಲಿ ಅವರು “ರಾಹುಲ್ ಗಾಂಧಿಯವರ ನಾಲ್ಕನೇ ತಲೆಮಾರಿನವರು ಸಹ ಕಾಶ್ಮೀರದಲ್ಲಿ 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಾಗುವುದಿಲ್ಲ” ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!