AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾಗಾಂಧಿ ಸ್ವರ್ಗದಿಂದ ಇಳಿದು ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ; ಅಮಿತ್ ಶಾ

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಕರೆ ನೀಡುವ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರದ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅದು ಎಂದಿಗೂ ಸಾಧ್ಯವಿಲ್ಲ ಎಂದು ದೃಢವಾಗಿ ಪ್ರತಿಪಾದಿಸಿದ್ದಾರೆ.

ಇಂದಿರಾಗಾಂಧಿ ಸ್ವರ್ಗದಿಂದ ಇಳಿದು ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ; ಅಮಿತ್ ಶಾ
ಅಮಿತ್ ಶಾ
ಸುಷ್ಮಾ ಚಕ್ರೆ
|

Updated on: Nov 13, 2024 | 8:31 PM

Share

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರವು ಈ ಹಿಂದೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದಕ್ಕೆ ಖಂಡನೆ ವ್ಯಕ್ತಪಡಿಸಿದೆ. 370ನೇ ವಿಧಿಯನ್ನು ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದ ಕೆಲವೇ ದಿನಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂದಿರಾ ಗಾಂಧಿಯೇ ಸ್ವರ್ಗದಿಂದ ಕೆಳಗಿಳಿದು ಬಂದರೂ ಈ 370ನೇ ವಿಧಿಯನ್ನು ಯಾವುದೇ ಕಾರಣಕ್ಕೂ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, “ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಶ್ರೀನಗರದ ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ನನಗೆ ಭಯವಾಯಿತು ಎಂಬ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಶೀಲ್‌ಕುಮಾರ್ ಶಿಂಧೆ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, “ಶಿಂಧೆಯವರೇ, ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಹೋಗಿ, ನಿಮಗೆ ಯಾವುದೇ ತೊಂದರೆಯಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸಿಐಎಸ್​ಎಫ್​ನ ಮೊದಲ ಸಂಪೂರ್ಣ ಮಹಿಳಾ ಬೆಟಾಲಿಯನ್ ರಚನೆಗೆ ಸರ್ಕಾರ ಅನುಮೋದನೆ; ಅಮಿತ್ ಶಾ ಘೋಷಣೆ

“ಸೋನಿಯಾ ಗಾಂಧಿ -ಮನಮೋಹನ್ ಸಿಂಗ್ ಆಡಳಿತದ 10 ವರ್ಷಗಳ ಅವಧಿಯಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟಗಳನ್ನು ಪ್ರಚೋದಿಸುತ್ತಿದ್ದರು” ಎಂದು ಅಮಿತ್ ಶಾ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಮತ್ತೊಂದು ರ್ಯಾಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು. ಅಲ್ಲಿ ಅವರು “ರಾಹುಲ್ ಗಾಂಧಿಯವರ ನಾಲ್ಕನೇ ತಲೆಮಾರಿನವರು ಸಹ ಕಾಶ್ಮೀರದಲ್ಲಿ 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಾಗುವುದಿಲ್ಲ” ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ