AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುಪತಿನಾಥ ರಾಜ ಪಲ್ಲಕ್ಕಿ ಉತ್ಸವದಲ್ಲಿ ಬೆಂಕಿ ಉಗುಳುವ ಸಾಹಸ ಪ್ರದರ್ಶಿಸುತ್ತಿದ್ದ ಕಲಾವಿದನ ಮುಖಕ್ಕೆ ಹೊತ್ತಿಕೊಂಡ ಬೆಂಕಿ

ಸಾಮಾನ್ಯವಾಗಿ ದೇವಸ್ಥಾನದ ವಾರ್ಷಿಕ ಕಾರ್ಯಕ್ರಮಗಳು, ಜಾತ್ರೆಯ ಸಂದರ್ಭದಲ್ಲಿ ಪೂಜಾ ಕುಣಿತ, ಹಾಡು ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯುವುದು ವಾಡಿಕೆ. ಹಾಗೆಯೇ ಮಂಡಸೌರ್​ನಲ್ಲಿ ಅಷ್ಟಧಾತುಗಳಿಂದ ಮಾಡಿದ ಪಶುಪತಿನಾಥ ಪ್ರತಿಮೆಯ ರಾಜ ಪಲ್ಲಕ್ಕಿಯ ಮೆರವಣಿಗೆಯ ಸಮಯದಲ್ಲಿ ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮುಖಕ್ಕೆ ಬೆಂಕಿ ಹೊತ್ತಿಕೊಂಡು ಭಾರಿ ಅನಾಹುತ ಸೃಷ್ಟಿಸಿತ್ತು.

ಪಶುಪತಿನಾಥ ರಾಜ ಪಲ್ಲಕ್ಕಿ ಉತ್ಸವದಲ್ಲಿ ಬೆಂಕಿ ಉಗುಳುವ ಸಾಹಸ ಪ್ರದರ್ಶಿಸುತ್ತಿದ್ದ ಕಲಾವಿದನ ಮುಖಕ್ಕೆ ಹೊತ್ತಿಕೊಂಡ ಬೆಂಕಿ
ಬೆಂಕಿImage Credit source: Free Press Journal
ನಯನಾ ರಾಜೀವ್
|

Updated on:Aug 22, 2023 | 11:05 AM

Share

ಸಾಮಾನ್ಯವಾಗಿ ದೇವಸ್ಥಾನದ ವಾರ್ಷಿಕ ಕಾರ್ಯಕ್ರಮಗಳು, ಜಾತ್ರೆಯ ಸಂದರ್ಭದಲ್ಲಿ ಪೂಜಾ ಕುಣಿತ, ಹಾಡು ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯುವುದು ವಾಡಿಕೆ. ಹಾಗೆಯೇ ಮಂಡಸೌರ್​ನಲ್ಲಿ ಅಷ್ಟಧಾತುಗಳಿಂದ ಮಾಡಿದ ಪಶುಪತಿನಾಥ ಪ್ರತಿಮೆಯ ರಾಜ ಪಲ್ಲಕ್ಕಿಯ ಮೆರವಣಿಗೆಯ ಸಮಯದಲ್ಲಿ ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮುಖಕ್ಕೆ ಬೆಂಕಿ ಹೊತ್ತಿಕೊಂಡು ಭಾರಿ ಅನಾಹುತ ಸೃಷ್ಟಿಸಿತ್ತು.

ಉಜ್ಜಯಿನಿಯ ಕಲಾವಿದರು ಧಾರ್ಮಿಕ ಹಾಡುಗಳು, ನೃತ್ಯ ಪ್ರದರ್ಶನ ನಡೆಸುತ್ತಿದ್ದರು, ಕಲಾವಿದ ಬಾಯಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದಾಗ ಮುಖಕ್ಕೆ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತಾಯಿ ಕಲ್ಕಾಳ ವೇಷ ಧರಿಸಿದ್ದ ವ್ಯಕ್ತಿ ಬಾಯಿಗೆ ಪೆಟ್ರೋಲ್ ತುಂಬಿಸಿಕೊಂಡು ಬೆಂಕಿ ಹಚ್ಚಲು ಯತ್ನಿಸಿದಾಗ ಕಲಾವಿದ ಮುಖವಾಡ ಧರಿಸಿದ್ದರೂ ಮುಖಕ್ಕೆ ಬೆಂಕಿ ಆವರಿಸಿಕೊಂಡಿತ್ತು. ತಕ್ಷಣವೇ ದೇವರ ಮುಖವಾಡವನ್ನು ತೆಗೆದು ಕೆಳಗೆ ಹಾಕಿದ್ದಾರೆ.

ಹೆಚ್ಚಿನ ಗಾಯಗಳೇನು ಆಗಿಲ್ಲ, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಕಲಾವಿದರು ಇಂತಹ ಅಪಾಯಕಾರಿ ಸಾಹಸ ಪ್ರದರ್ಶನ ಮಾಡುವುದನ್ನು ನಾವು ನಿಷೇಧಿಸಿದ್ದೆವು, ಆದರೆ ಅವರು ಮತ್ತದೇ ಸಾಹಸವನ್ನು ಪ್ರದರ್ಶಿಸಿರುವುದು ಈ ಘಟನೆಗೆ ಕಾರಣವಾಯಿತು.

ಕಲಾವಿದರ ಸಾಹಸದ ವಿಡಿಯೋ ಇಲ್ಲಿದೆ

ಸ್ಥಳದಲ್ಲಿದ್ದ ಸಹ ಕಲಾವಿದರು ತಕ್ಷಣ ರಕ್ಷಣೆಗೆ ಬಂದರು, ಸಂಭಾವ್ಯ ಅನಾಹುತವನ್ನು ತಪ್ಪಿಸಿದರು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಮಧ್ಯಪ್ರದೇಶದಲ್ಲೂ ಇಂಥದ್ದೇ ಘಟನೆ ನಡೆದಿತ್ತು

ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಮುಖ್ಯಮಂತ್ರಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಯುವಕನೊಬ್ಬ ಬೆಂಕಿ ಉಗುಳುವ ಸಾಹಸಕ್ಕೆ ಯತ್ನಿಸಿ ಪ್ರಾಣ ಕಳೆದುಕೊಂಡಿದ್ದ.

ಬಿಜೆಪಿ ನಾಯಕರೊಬ್ಬರು ಕಲಾವಿದರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಸಾಹಸ ಪ್ರದರ್ಶಿಸಲು ಒತ್ತಾಯಿಸುತ್ತಿದ್ದಾರೆ ಎಂದು ಸಹ ಕಲಾವಿದರು ಆರೋಪಿಸಿದ್ದರು, ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Tue, 22 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ