AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋ-ಮ್ಯಾನ್ಮಾರ್ ಗಡಿ ಬಳಿ ನಾಗಾ ಬಂಡುಕೋರರ ಶಿಬಿರ ನಾಶ ಮಾಡಿದ ಅರುಣಾಚಲ ಪೊಲೀಸ್

ಬಂಡುಕೋರರೊಂದಿಗೆ ತೊಡಗಿಸಿಕೊಂಡಿದ್ದ ಶಿಬಿರವನ್ನು ನಾಶಪಡಿಸಿ, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಂಡೋ-ಮ್ಯಾನ್ಮಾರ್ ಗಡಿ ಬಳಿ ನಾಗಾ ಬಂಡುಕೋರರ ಶಿಬಿರ ನಾಶ ಮಾಡಿದ ಅರುಣಾಚಲ ಪೊಲೀಸ್
ಬಂಡುಕೋರರ ಶಿಬಿರ ಸುಟ್ಟುಹಾಕಿದ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 23, 2023 | 11:30 PM

Share

ಗುವಾಹಟಿ: ಚಾಂಗ್ಲಾಂಗ್ ಜಿಲ್ಲೆಯ ಭಾರತ-ಮ್ಯಾನ್ಮಾರ್ ಗಡಿಯ (India-Myanmar border) ಬಳಿ ನಾಗಾ ಬಂಡುಕೋರ (Naga rebel) ಸಂಘಟನೆಯ ಶಿಬಿರವನ್ನು ಸುಟ್ಟು ನಾಶ ಮಾಡಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿರುವುದಾಗಿ ಅರುಣಾಚಲ ಪ್ರದೇಶ ಪೊಲೀಸರು ಹೇಳಿದ್ದಾರೆ. ಸಶಸ್ತ್ರ ಗುಂಪು, ಪೂರ್ವ ನಾಗಾ ನ್ಯಾಷನಲ್ ಗವರ್ನಮೆಂಟ್ (ENNG) ವಿರುದ್ಧದ ಕಾರ್ಯಾಚರಣೆಯನ್ನು ಚಾಂಗ್ಲಾಂಗ್ ಜಿಲ್ಲಾ ಪೊಲೀಸ್ ಮತ್ತು ವಿಶೇಷ ತನಿಖಾ ತಂಡ (SIT) ಜಂಟಿ ತಂಡವು ನಡೆಸಿತು. ಬಂಡುಕೋರರೊಂದಿಗೆ ತೊಡಗಿಸಿಕೊಂಡಿದ್ದ ಶಿಬಿರವನ್ನು ನಾಶಪಡಿಸಿ, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ರಿಮಾ ಪುಟೊಕ್ ವೃತ್ತದ ಲುಂಗ್‌ಪಾಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಿಬಿರದಲ್ಲಿದ್ದ ಸುಮಾರು ಐವರು ಬಂಡುಕೋರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಪೊಲೀಸ್ ತಂಡವು ಶಿಬಿರವನ್ನು ಸುಟ್ಟುಹಾಕಿತು. ದಾಳಿಯಲ್ಲಿ AK-47 ಅಸಾಲ್ಟ್ ರೈಫಲ್, M-16 ರೈಫಲ್, ಹ್ಯಾಂಡ್ ಗ್ರೆನೇಡ್‌ಗಳು, ಮ್ಯಾಗಜೀನ್‌ಗಳು ಮತ್ತು 120 ಕ್ಕೂ ಹೆಚ್ಚು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅರುಣಾಚಲ ಪ್ರದೇಶದ ಪೊಲೀಸರು ಧೈರ್ಯಶಾಲಿ, ಪರಾಕ್ರಮಿಗಳು ಮತ್ತು ಮುಂಚೂಣಿಯಲ್ಲಿ ಹೋರಾಡುತ್ತಿದ್ದಾರೆ.ನಿಮ್ಮ ಬಗ್ಗೆ ಹೆಮ್ಮೆಯಿದೆ” ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸರ್ವಶಕ್ತನು ಪ್ರಧಾನಿಯಾಗಿ ನಮಗೆ ಮೋದಿಯನ್ನು ನೀಡಲಿ, ಅವರು ಮಹಾನ್ ವ್ಯಕ್ತಿ ಎಂದು ಹೇಳಿದ ಪಾಕಿಸ್ತಾನಿ; ವಿಡಿಯೊ ವೈರಲ್

ಜನವರಿ 2016 ರಲ್ಲಿ ರೂಪುಗೊಂಡ ENNG, ಅರುಣಾಚಲ ಪ್ರದೇಶದ ತಿರಾಪ್, ಚಾಂಗ್ಲಾಂಗ್ ಮತ್ತು ಲಾಂಗ್ಡಿಂಗ್ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಇದು ರಚನೆಯಾದಾಗ, ಇತರ ನಾಗಾ ಬಂಡಾಯ ಗುಂಪುಗಳು ಅನೇಕ ದಶಕಗಳ ನಂತರವೂ ನಾಗಾ ರಾಜಕೀಯ ಸಮಸ್ಯೆಗೆ ಅಂತಿಮ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಾಗದ ಕಾರಣ ಜನರನ್ನು ವಿಫಲಗೊಳಿಸಿವೆ ಎಂದು ಗುಂಪು ಆರೋಪಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!