AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ಕೇಂದ್ರ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಸಲ್ಲಿಸಿದ್ದಾರೆ.

ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 23, 2024 | 6:39 PM

Share

ದೆಹಲಿ ಮಾರ್ಚ್ 23: ಇದೀಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಮ್ಮ ಬಂಧನ ಮತ್ತು ಜಾರಿ ನಿರ್ದೇಶನಾಲಯ (Enforcement Directorate) ಕಸ್ಟಡಿ ವಿಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ (Delhi high court) ಮೊರೆ ಹೋಗಿದ್ದಾರೆ. ಗುರುವಾರ ಕೇಂದ್ರ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದಾರೆ.

ಮನಿ ಲಾಂಡರಿಂಗ್ ತನಿಖೆಯಲ್ಲಿ ಇಡಿ ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಕೇಜ್ರಿವಾಲ್ ಅವರ ಬಂಧನವಾಗಿದೆ. ಶುಕ್ರವಾರ, ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥರನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರದ ಸಂಕೀರ್ಣತೆಗಳನ್ನು ಬಿಚ್ಚಿಡಲು ಇದು ಅನಿವಾರ್ಯವಾಗಿದೆ ಎಂದು ಇಡಿ ಒತ್ತಿ ಹೇಳಿದ ನಂತರ ನ್ಯಾಯಾಧೀಶರು ಕೇಜ್ರಿವಾಲ್ ಅವರ ಕಸ್ಟಡಿಗೆ ಇಡಿಗೆ ಅನುಮತಿ ನೀಡಿದ್ದಾರೆ.

ಆರೋಪಿಯ ಪಾತ್ರಕ್ಕೆ ಸಂಬಂಧಿಸಿದಂತೆ ಅವರ ವಿವರವಾದ ಮತ್ತು ನಿರಂತರ ವಿಚಾರಣೆಯ ಉದ್ದೇಶಗಳಿಗಾಗಿ ಮತ್ತು ಅಪರಾಧದ ಉಳಿದ ಆದಾಯವನ್ನು ಬಹಿರಂಗಪಡಿಸಲು ಮತ್ತು ಡಿಜಿಟಲ್ ಸಾಧನಗಳಿಂದ ಪಡೆದ ಡೇಟಾ ಮತ್ತು ಈ ಸಮಯದಲ್ಲಿ ವಶಪಡಿಸಿಕೊಂಡ ವಸ್ತುಗಳೊಂದಿಗೆ ವಿಚಾರಣೆಗೊಳಪಡಿಸು ಆರೋಪಿಯನ್ನು 28.03.2024 ರವರೆಗೆ ಇಡಿ ವಶಕ್ಕೆ ನೀಡಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕೇಜ್ರಿವಾಲ್ ತಮ್ಮ ಮನವಿಯಲ್ಲಿ, ಅವರ ಬಂಧನ ಮತ್ತು ರಿಮಾಂಡ್ ಕಾನೂನುಬಾಹಿರವಾಗಿದೆ. ತಕ್ಷಣ ಬಂಧನದಿಂದ ಬಿಡುಗಡೆ ಮಾಡಲು ನಾನು ಅರ್ಹ ಎಂದು  ಪ್ರತಿಪಾದಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ಆರೋಪ ಕೇಳಿ ಬಂದ ನಂತರ ಅದನ್ನು  ರದ್ದುಗೊಳಿಸಲಾಯಿತು. ಎಎಪಿಯ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಜೈಲಿನಿಂದಲೇ ಸರ್ಕಾರವನ್ನು ನಡೆಸುತ್ತಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ದೆಹಲಿ ಸರ್ಕಾರವನ್ನು ನಡೆಸಲು ಜೈಲಿನಲ್ಲಿ ಕಚೇರಿಯನ್ನು ಸ್ಥಾಪಿಸಲು ನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ್ ಮಾನ್ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಬಂಧನ ಮಾರ್ಚ್ 26 ರವರೆಗೆ ವಿಸ್ತರಣೆ

ಕಾರಾಗೃಹದಿಂದ ಸರ್ಕಾರವನ್ನು ಮುನ್ನಡೆಸುವುದನ್ನು ಕಾನೂನು ನಿಷೇಧಿಸುವುದಿಲ್ಲ. ಆದರೆ ಅರವಿಂದ್ ಕೇಜ್ರಿವಾಲ್ ಅಲ್ಲಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿವಿಧ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು ತಜ್ಞರು ಸೂಚಿಸಿದ್ದಾರೆ.

“ಕೇಜ್ರಿವಾಲ್ ಅವರ ಬಂಧನವು ಮುಖ್ಯಮಂತ್ರಿಯಾಗಿ ಅವರ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ” ಎಂದು ಸಾಂವಿಧಾನಿಕ ತಜ್ಞ ಪಿಡಿಟಿ ಆಚಾರಿ ಹೇಳಿದ್ದಾರೆ. “ಮುಖ್ಯಮಂತ್ರಿಯಾಗಿ ಅವರು ತಮ್ಮ ಕಾರ್ಯವನ್ನು ಸುಗಮವಾಗಿ ನಿರ್ವಹಿಸಬಹುದೇ ಎಂಬುದು ಜೈಲು ಕೈಪಿಡಿಗೆ ಒಳಪಟ್ಟಿರುತ್ತದೆ” ಎಂದು ಹೇಳಿದರು. “ಜೈಲು ಕೈಪಿಡಿಯು ಅಂತಹ ವಿಷಯಗಳನ್ನು ಅನುಮತಿಸಿದರೆ, ಅದು ಸರಿ. ಇಲ್ಲದಿದ್ದರೆ, ಅವರು ನ್ಯಾಯಾಲಯದಿಂದ ಅನುಮತಿ ಪಡೆಯಬೇಕು. ನಂತರ ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ನಿರ್ದಿಷ್ಟ ನಿರ್ದೇಶನವನ್ನು ನೀಡಬೇಕು” ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sat, 23 March 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ