Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು ಪ್ರಶ್ನಿಸಿ ಇಡಿ ಮೇಲ್ಮನವಿ; ಇಂದು ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅಮಾನತುಗೊಳಿಸುವಂತೆ ಇಡಿ (ಜಾರಿ ನಿರ್ದೇಶನಾಲಯ) ಸಲ್ಲಿಸಿದ ಮೇಲ್ಮನವಿಯನ್ನು ಇಂದು (ಜೂನ್ 25) ದೆಹಲಿ ಹೈಕೋರ್ಟ್ ಘೋಷಿಸಲಿದೆ.

Arvind Kejriwal: ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು ಪ್ರಶ್ನಿಸಿ ಇಡಿ ಮೇಲ್ಮನವಿ; ಇಂದು ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jun 25, 2024 | 6:53 AM

ನವದೆಹಲಿ: ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಮೇಲ್ಮನವಿಯ ಕುರಿತು ದೆಹಲಿ ಹೈಕೋರ್ಟ್ (Delhi High Court) ಇಂದು (ಮಂಗಳವಾರ) ತನ್ನ ಆದೇಶವನ್ನು ಪ್ರಕಟಿಸಲಿದೆ.

ಹೈಕೋರ್ಟ್ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ರಜಾಕಾಲದ ಪೀಠವು ಇಂದು ಮಧ್ಯಾಹ್ನ 2.30ರ ಸುಮಾರಿಗೆ ಆದೇಶವನ್ನು ಪ್ರಕಟಿಸುತ್ತದೆ. ಜೂನ್ 21ರಂದು ಇಡಿ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರಿಂದಲೂ ವ್ಯಾಪಕ ವಾದಗಳನ್ನು ಆಲಿಸಿದ ನಂತರ ಇಡಿ ಮೇಲ್ಮನವಿಯ ಮೇಲಿನ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಇಡಿ ಮೇಲ್ಮನವಿಯ ಕುರಿತು ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ನೀಡುವವರೆಗೆ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಆದೇಶವನ್ನು ತಡೆಹಿಡಿಯಲಾಗಿದೆ.

ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಇಡಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 45ರ ಆದೇಶಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದರು.

ಇದನ್ನೂ ಓದಿ: ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ಮಾರ್ಚ್ 21ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು. ಅದರ ಪ್ರಕಾರ ಅವರು ಶುಕ್ರವಾರವೇ ಬಿಡುಗಡೆಯಾಗಬಹುದಿತ್ತು. ಆದರೆ. ಅದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತನ್ನ ಆದೇಶದವರೆಗೆ ಆ ಜಾಮೀನಿಗೆ ತಡೆ ನೀಡಿತ್ತು.

ಜೂನ್ 20ರಂದು ಅರವಿಂದ್ ಕೇಜ್ರಿವಾಲ್‌ಗೆ ರೂಸ್ ಅವೆನ್ಯೂ ನ್ಯಾಯಾಲಯದ ರಜೆಯ ನ್ಯಾಯಾಧೀಶ ನಿಯಾಯ್ ಬಿಂದು ಅವರು ದೆಹಲಿ ಮದ್ಯ ಪ್ರಕರಣದಲ್ಲಿ ಜಾಮೀನು ನೀಡಿದ್ದರು. 1 ಲಕ್ಷ ರೂ. ವೈಯಕ್ತಿಕ ಜಾಮೀನು ಬಾಂಡ್ ನೀಡುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು. ಈ ಆದೇಶವನ್ನು ಪ್ರಕಟಿಸಿದ ಕೂಡಲೇ ಜಾಮೀನು ಬಾಂಡ್‌ಗೆ ಸಹಿ ಹಾಕಲು 48 ಗಂಟೆಗಳ ಕಾಲಾವಕಾಶ ನೀಡುವಂತೆ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿತು.

ತಾನು ತೀರ್ಪು ನೀಡುವವರೆಗೆ ಜಾಮೀನು ಆದೇಶವನ್ನು ತಡೆಹಿಡಿಯಲು ಸೂಚಿಸಿತ್ತು. ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿತು. 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ಅದರಲ್ಲಿ ತನಿಖೆಗೆ ಅಡ್ಡಿಪಡಿಸಲು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದಿಲ್ಲ ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿತು.

ಇದನ್ನೂ ಓದಿ: Excise Policy case: ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ; ದೆಹಲಿ ಹೈಕೋರ್ಟ್​ನಿಂದ ಮಂಗಳವಾರ ತೀರ್ಪು ಪ್ರಕಟ

ಆದರೆ, ನ್ಯಾಯಾಧೀಶರು ಈ ಮನವಿಗೆ ಅವಕಾಶ ನೀಡಲಿಲ್ಲ ಮತ್ತು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದರು. ಶುಕ್ರವಾರದೊಳಗೆ ಜಾಮೀನು ಬಾಂಡ್ ಅನ್ನು ಕರ್ತವ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸುವಂತೆ ಸೂಚಿಸಿದರು. ಜಾಮೀನು ಆದೇಶಕ್ಕೆ ತಡೆ ಇಲ್ಲ ಎಂದು ವಿಚಾರಣಾ ನ್ಯಾಯಾಲಯ ಇಡಿಗೆ ಸ್ಪಷ್ಟಪಡಿಸಿದೆ.

ಲೋಕಸಭೆ ಚುನಾವಣೆಗೆ ಮುನ್ನ ನಡೆದ ಹೈಡ್ರಾಮಾದಲ್ಲಿ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2ರಂದು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ