AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್; ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ಎಎಪಿಗೆ ಟಿಎಂಸಿ ಬೆಂಬಲ

ಇಲ್ಲಿಯವರೆಗೆ ಆಮ್ ಆದ್ಮಿ ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಕೇಂದ್ರದ ವಿರುದ್ಧ ಕೇಜ್ರಿವಾಲ್ ಸರ್ಕಾರದ ಹೋರಾಟದಲ್ಲಿ ಎಎಪಿಗೆ ಬೆಂಬಲ ಸೂಚಿಸಿ

ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್; ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ಎಎಪಿಗೆ ಟಿಎಂಸಿ ಬೆಂಬಲ
ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on:May 23, 2023 | 7:13 PM

Share

ಕೋಲ್ಕತ್ತಾ: ದೇಶಾದ್ಯಂತ ಮತ್ತೊಂದು ಸುತ್ತಿನ ಪ್ರತಿಪಕ್ಷಗಳ ಸಭೆಗಳಲ್ಲಿ ದೆಹಲಿ (Delhi) ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಇಂದು ಕೋಲ್ಕತ್ತಾದ ರಾಜ್ಯ ಸಚಿವಾಲಯವಿರುವ ನಬನ್ನಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಭೇಟಿ ಮಾಡಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ದೆಹಲಿ ಸಚಿವ ಅತಿಶಿ ಸಿಂಗ್ ಕೂಡಾ ಕೇಜ್ರಿವಾಲ್ ಜತೆಗಿದ್ದರು. ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರಕ್ಕೆ ಒಲವು ತೋರಿದ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಕುರಿತು ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲಂಘಿಸುವ ಕಾರ್ಯಕಾರಿ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದ ನಂತರ ಈ ಸಭೆ ನಡೆದಿದೆ.

ಇಲ್ಲಿಯವರೆಗೆ ಆಮ್ ಆದ್ಮಿ ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಕೇಂದ್ರದ ವಿರುದ್ಧ ಕೇಜ್ರಿವಾಲ್ ಸರ್ಕಾರದ ಹೋರಾಟದಲ್ಲಿ ಎಎಪಿಗೆ ಬೆಂಬಲ ಸೂಚಿಸಿದೆ. ಕಾಂಗ್ರೆಸ್ ಪಕ್ಷವು ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯ ಎನ್​​ಸಿಟಿ ಸರ್ಕಾರದ ಅಧಿಕಾರಗಳ ಮೇಲೆ ಸುಪ್ರೀಂ ತೀರ್ಪಿನ ವಿರುದ್ಧ ತರಲಾದ ಸುಗ್ರೀವಾಜ್ಞೆಯ ವಿಷಯದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇದು ತನ್ನ ರಾಜ್ಯ ಘಟಕಗಳು ಮತ್ತು ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚಿಸಲಿದೆ. ಪಕ್ಷವು ಕಾನೂನಿನ ಆಳ್ವಿಕೆಯಲ್ಲಿ ನಂಬಿಕೆ ಹೊಂದಿದೆ. ಅದೇ ಸಮಯದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳುಗಳ ಆಧಾರದ ಮೇಲೆ ಅನಗತ್ಯ ಘರ್ಷಣೆ, ರಾಜಕೀಯ ಜಟಾಪಟಿ ಮತ್ತು ಪ್ರಚಾರಗಳನ್ನು ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ನಿನ್ನೆ ರಾತ್ರಿ ಟ್ವೀಟ್ ಮಾಡಿದ್ದಾರೆ.

ಕೇಜ್ರಿವಾಲ್ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿರುವುದರಿಂದ 2024 ರಲ್ಲಿ ಬಿಜೆಪಿಯನ್ನು ಎದುರಿಸಲು ಸಾಮೂಹಿಕ ಕಾರ್ಯತಂತ್ರವನ್ನು ರೂಪಿಸುವಂತಹ ಇತರ ವಿಷಯಗಳು ಸಹ ಕಾರ್ಯಸೂಚಿಯಲ್ಲಿರಬಹುದು ಎಂದು ಹೇಳಲಾಗಿದೆ. ಮಮತಾ ಬ್ಯಾನರ್ಜಿ ಅವರು ಈಗಾಗಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿಯ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ದೇಶಾದ್ಯಂತದ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾದ ನಂತರ ಈ ಸಭೆ ನಡೆದಿದೆ. ಈ ಎಲ್ಲಾ ನಾಯಕರು ಸಾಮಾನ್ಯ ಕಾರ್ಯತಂತ್ರದಲ್ಲಿ ಉತ್ಸುಕರಾಗಿದ್ದರೂ, ಮಮತಾ ಬ್ಯಾನರ್ಜಿ ಅವರು ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದ್ದಾರೆ. ಅಂದಹಾಗೆ ಪಟ್ನಾಯರ್ ಯಾವುದೇ ವಿರೋಧ ಪಕ್ಷದ ಒಕ್ಕೂಟಗಳಿಂದ ದೂರ ಉಳಿಯುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಸಿಡ್ನಿಯಲ್ಲಿರುವ ಹ್ಯಾರಿಸ್ ಪಾರ್ಕ್​​ಗೆ ಮರು ನಾಮಕರಣ; ‘ಲಿಟಲ್ ಇಂಡಿಯಾ’ ಗೇಟ್‌ವೇಗೆ ಮೋದಿ ಶಂಕುಸ್ಥಾಪನೆ

ನಿತೀಶ್ ಕುಮಾರ್ ಮತ್ತು ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಭಾನುವಾರ ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದರು. ಏತನ್ಮಧ್ಯೆ, ಅರವಿಂದ ಕೇಜ್ರಿವಾಲ್ ಅವರು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕ್ರಮವಾಗಿ ಮೇ 24 ಮತ್ತು 25 ರಂದು ಮುಂಬೈನಲ್ಲಿ ಭೇಟಿಯಾಗಿ ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ತಡೆಯುವ ಯೋಜನೆಯನ್ನು ಚರ್ಚಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Tue, 23 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ