ನಿಮ್ಮ ದ್ವೇಷ ನನ್ನೊಂದಿಗೆ, ನನ್ನ ಹೆತ್ತವರನ್ನು ಬಿಟ್ಟುಬಿಡಿ; ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸಂದೇಶ

ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ತಂದೆ-ತಾಯಿಯನ್ನು ಕೂಡ ಪೊಲೀಸ್ ವಿಚಾರಣೆಗೆ ಒಳಪಡಿಸುವ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಅರವಿಂದ್ ಕೇಜ್ರಿವಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು.

ನಿಮ್ಮ ದ್ವೇಷ ನನ್ನೊಂದಿಗೆ, ನನ್ನ ಹೆತ್ತವರನ್ನು ಬಿಟ್ಟುಬಿಡಿ; ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸಂದೇಶ
ತಂದೆ-ತಾಯಿ ಜೊತೆ ಅರವಿಂದ್ ಕೇಜ್ರಿವಾಲ್
Follow us
|

Updated on: May 23, 2024 | 5:49 PM

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ತಂದೆ-ತಾಯಿಯನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದರು. ಅದಕ್ಕೆ ಸಮಯಾವಕಾಶವನ್ನೂ ಕೇಳಿದ್ದರು. ಆದರೆ, ವಯಸ್ಸಾದ ತಂದೆ-ತಾಯಿಯನ್ನು ಪೊಲೀಸ್ ವಿಚಾರಣೆಗೆ ಒಳಪಡಿಸುವುದರ ಬಗ್ಗೆ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಮನವಿ ಮಾಡಿರುವ ಅರವಿಂದ್ ಕೇಜ್ರಿವಾಲ್, ನಿಮ್ಮ ದ್ವೇಷವೇನಿದ್ದರೂ ನನ್ನ ಮೇಲೆ. ನಮ್ಮಿಬ್ಬರ ನಡುವಿನ ಹೋರಾಟದಲ್ಲಿ ನನ್ನ ಪೋಷಕರನ್ನು ಎಳೆಯಬೇಡಿ ಎಂದಿದ್ದಾರೆ.

‘ನಿಮ್ಮ ಹೋರಾಟವೇನಿದ್ದರೂ ನನ್ನೊಂದಿಗೆ ಇರುವುದು. ನನ್ನ ತಂದೆ-ತಾಯಿ ಅಸ್ವಸ್ಥರಾಗಿದ್ದು, ಅವರಿಗೆ ಕಿರುಕುಳ ನೀಡಬೇಡಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ” ಎಂದು ಅರವಿಂದ್ ಕೇಜ್ರಿವಾಲ್ ಮೋದಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿಯೇ ಹೇಳಿದ್ದಾರೆ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೇಜ್ರಿವಾಲ್ ಅವರ ಪೋಷಕರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮೋದಿಗೆ ಈ ಸಂದೇಶ ರವಾನಿಸಿದ್ದಾರೆ. ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಎಎಪಿ ಸಂಸದರ ಮೇಲೆ ಹಲ್ಲೆ ನಡೆಸಿದಾಗ ಕೇಜ್ರಿವಾಲ್ ಅವರ ಪೋಷಕರು ಉಪಸ್ಥಿತರಿದ್ದರು. ಈ ಹಿನ್ನೆಲೆಯಲ್ಲಿ ಈ ವಿಚಾರಣೆಯನ್ನು ನಡೆಸಲು ಪೊಲೀಸರು ಮುಂದಾಗಿದ್ದು, ಅವರ ವಿಚಾರಣೆಯನ್ನು ಮುಂದೂಡಲಾಯಿತು.

ವರದಿಗಳ ಪ್ರಕಾರ, ಪೊಲೀಸರು ಮುಂದಿನ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪೋಷಕರ ಹೇಳಿಕೆಯನ್ನು ದಾಖಲಿಸಲಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ನನ್ನ ಮನವಿ. ಪ್ರಧಾನಮಂತ್ರಿಯವರೇ, ನೀವು ನನ್ನನ್ನು ಕೆಳಗೆ ಎಳೆಯಲು ಹಲವಾರು ಪ್ರಯತ್ನಗಳನ್ನು ಮಾಡಿದ್ದೀರಿ. ನೀವು ನನ್ನನ್ನು ಬಂಧಿಸಿದ್ದೀರಿ; ತಿಹಾರ್‌ ಜೈಲಿನಲ್ಲಿ ನನಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡಿದ್ದೀರಿ. ಆದರೆ, ನಾನು ಅದ್ಯಾವುದಕ್ಕೂ ಮಣಿಯಲಿಲ್ಲ. ಇಂದು ನೀವು ಎಲ್ಲ ಮಿತಿಗಳನ್ನು ದಾಟಿದ್ದೀರಿ. ನೀನು ನನ್ನನ್ನು ಬಂಧಿಸಿದ ದಿನದಿಂದ ನನ್ನ ತಾಯಿಯು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನನ್ನ ತಂದೆಗೆ 85 ವರ್ಷ ವಯಸ್ಸಾಗಿದೆ. ಪೊಲೀಸರು ಅವರನ್ನು ವಿಚಾರಣೆ ನಡೆಸುವುದು ಸರಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ನೀವು ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ಸ್ವೀಕರಿಸುತ್ತಾರಾ? ಅರವಿಂದ್ ಕೇಜ್ರಿವಾಲ್ ನೀಡಿದ ಉತ್ತರವಿದು

ಮೇ 13ರಂದು ಸಿಎಂ ನಿವಾಸಕ್ಕೆ ಹೋದಾಗ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದ ಸದಸ್ಯರು ಬೆಳಗಿನ ತಿಂಡಿ ಸೇವಿಸುತ್ತಿದ್ದರು ಎಂದು ಸ್ವಾತಿ ಮಲಿವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಕೇಜ್ರಿವಾಲ್ ಅವರ ಪೋಷಕರಿಗೆ ನಮಸ್ಕರಿಸಿ ನಂತರ ಡ್ರಾಯಿಂಗ್ ರೂಮ್‌ನಲ್ಲಿ ಕೇಜ್ರಿವಾಲ್‌ಗಾಗಿ ಕಾಯುತ್ತಿದ್ದರು. ಆದರೆ ಸಿಎಂ ಸಹಾಯಕ ಬಿಭವ್ ಕುಮಾರ್ ಆಕೆಯ ಹಿಂದೆಯೇ ಬಂದು ಡ್ರಾಯಿಂಗ್ ರೂಮಿನಲ್ಲಿ ಅವಳ ಮೇಲೆ ಹಲ್ಲೆ ಮಾಡಿದನು. ನಂತರ ಆಕೆಗೆ ಹೊಡೆದು, ಒದ್ದು ಹಿಂಸೆ ನೀಡಿದನು ಎಂದು ಆಕೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆ ವೇಳೆ ಮನೆಯಲ್ಲಿದ್ದ ಕೇಜ್ರಿವಾಲ್ ಅವರ ತಂದೆ-ತಾಯಿಯ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ