AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಕೂಲರ್ ನೀಡಿಲ್ಲ; ಆಮ್ ಆದ್ಮಿ ಆರೋಪ

ಅಕ್ರಮ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿದ್ದರು. ಇದೀಗ ಅವರ ಜಾಮೀನು ಅವಧಿ ಮುಗಿದಿದ್ದು, ಮತ್ತೆ ಜೈಲಿಗೆ ವಾಪಾಸಾಗಿದ್ದಾರೆ.

ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಕೂಲರ್ ನೀಡಿಲ್ಲ; ಆಮ್ ಆದ್ಮಿ ಆರೋಪ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jun 03, 2024 | 9:59 PM

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ಮಧ್ಯಂತರ ಜಾಮೀನು ಮುಗಿದ ಹಿನ್ನೆಲೆಯಲ್ಲಿ ಅವರು ಭಾನುವಾರ ತಿಹಾರ್ ಜೈಲಿನಲ್ಲಿ ಶರಣಾಗಿದ್ದಾರೆ. ಮಧ್ಯಂತರ ಜಾಮೀನು ಮುಗಿದ ನಂತರ ತಿಹಾರ್ ಜೈಲಿನಲ್ಲಿರುವ (Tihar Jail)  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಿರುಕುಳ ನೀಡುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ಅವರನ್ನು ಬಿಜೆಪಿಯವರು ನಕಲಿ ಪ್ರಕರಣದಲ್ಲಿ ಬಂಧಿಸಿದ್ದಾರೆ. ನಿನ್ನೆ ಅರವಿಂದ್ ಕೇಜ್ರಿವಾಲ್ ಶರಣಾಗಿ ತಿಹಾರ್ ಜೈಲಿಗೆ ಹೋಗಿದ್ದರು. ಆದರೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರಕ್ಕೆ ಇನ್ನೂ ನೆಮ್ಮದಿ ಸಿಕ್ಕಿಲ್ಲ. ಅರವಿಂದ್ ಕೇಜ್ರಿವಾಲ್‌ಗೆ ಕಿರುಕುಳ ನೀಡುವುದನ್ನು ಬಿಜೆಪಿ ಬಿಡುತ್ತಿಲ್ಲ. ಕೂಲರ್ ಕೂಡ ನೀಡದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿದೆ ಎಂದು ಸಚಿವೆ ಅತಿಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ದೆಹಲಿಯಲ್ಲಿ ತಾಪಮಾನವು 48 ಡಿಗ್ರಿ, 50 ಡಿಗ್ರಿ ಸೆಲ್ಸಿಯಸ್ ತಲುಪುತ್ತಿರುವ ಸಮಯದಲ್ಲಿ ತಿಹಾರ್ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್‌ಗಳಿಗೆ ಕೂಲರ್‌ಗಳನ್ನು ನೀಡಲಾಗುತ್ತಿದೆ. ಆದರೆ ದೆಹಲಿಯ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್‌ಗೆ ಈ ಬಿಸಿಲಿನ ಶಾಖದಲ್ಲಿಯೂ ಕೂಲರ್ ನೀಡಿಲ್ಲ. ಇದಕ್ಕೆ ಬಿಜೆಪಿ ನಾಯಕರು ಹಾಗೂ ಅವರ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಉತ್ತರಿಸಬೇಕು. ಇದು ಅವರು ಎಷ್ಟು ಕೆಳ ಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಅತಿಶಿ ಆರೋಪಕ್ಕೆ ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಅನಾರೋಗ್ಯಕ್ಕೆ ಒಳಗಾಗಿರುವ ಕೈದಿಗಳಿಗೆ ಕೂಲರ್‌ಗಳನ್ನು ನೀಡಲಾಗುತ್ತದೆ. ನ್ಯಾಯಾಲಯವು ಕೂಲರ್ ನೀಡಲು ಆದೇಶಿಸಿದರೆ ನಾವು ನೀಡುತ್ತೇವೆ.” ಎಂದಿದ್ದಾರೆ.

ಭಾನುವಾರದ ವೈದ್ಯಕೀಯ ಪರೀಕ್ಷೆಯ ವೇಳೆ ಆಮ್ ಆದ್ಮಿ ಪಕ್ಷದ ಸಂಚಾಲಕನ ತೂಕವನ್ನು 3 ಯಂತ್ರಗಳಲ್ಲಿ ಅಳೆಯಲಾಗಿದ್ದು, ಅದು ವಿಭಿನ್ನ ತೂಕವನ್ನು ತೋರಿಸುತ್ತಿತ್ತು ಎಂದು ಅತಿಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?

“ಅರವಿಂದ್ ಕೇಜ್ರಿವಾಲ್ ಅವರ ತೂಕ 61 ಕೆಜಿ ಎಂದು ಕಂಡುಬಂದಿದೆ. ತಿಹಾರ್ ಅಧಿಕಾರಿಗಳು ಮತ್ತೊಂದು ಯಂತ್ರವನ್ನು ಬಳಸಿದರು ಅದು ಅವರ ತೂಕವನ್ನು 64 ಕೆಜಿ ಎಂದು ತೋರಿಸಿದೆ. ಇದರಿಂದ ತೃಪ್ತರಾಗದ ತಿಹಾರ್ ಅಧಿಕಾರಿಗಳು ಮೂರನೇ ಯಂತ್ರವನ್ನು ಬಳಸಿದರು. ಅದು ಅವರ ತೂಕ 66.5 ಕೆಜಿ ಎಂದು ತೋರಿಸಿದೆ ಎಂದು ಅತಿಶಿ ಆರೋಪಿಸಿದ್ದಾರೆ.

“ಮಾರ್ಚ್ 21ರಂದು ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗ ಅವರ ತೂಕ 70 ಕೆಜಿ ಮತ್ತು ಸೋಮವಾರ ಶರಣಾಗುವ ಮೊದಲು ಮನೆಯಲ್ಲಿ ತೂಕ ಮಾಡಿದಾಗ ಅದು 63 ಕೆಜಿಗೆ ಇಳಿದಿದೆ. ಒಟ್ಟು 7 ಕೆಜಿ ಇಳಿಕೆಯಾಗಿದೆ. ಇದು ಗಂಭೀರ ವಿಷಯವಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಅವರ ಜಾಮೀನು ಮುಂದೂಡಲು ಮನವಿ ಮಾಡಲಾಗಿತ್ತು. ಆದರೆ ಇದನ್ನು ಇಡಿ ವಿರೋಧಿಸಿದೆ ಎಂದು ಸಚಿವರು ಹೇಳಿದ್ದಾರೆ.

“ಕೇಜ್ರಿವಾಲ್ ಅವರ ಬಿಪಿ 120/76 ಅನ್ನು ಅಳೆಯಲಾಗಿದೆ ಮತ್ತು ಸೋಮವಾರ ಶುಗರ್ ಮಟ್ಟವು 120 ರಷ್ಟಿತ್ತು. ಅವರಿಗೆ ದಿನಕ್ಕೆ 2 ಬಾರಿ ಇನ್ಸುಲಿನ್ ನೀಡಲಾಗುತ್ತದೆ. ಜೈಲಿನಲ್ಲಿ ಇಬ್ಬರು ವೈದ್ಯರಿಂದ ನಿಯಮಿತ ಮೇಲ್ವಿಚಾರಣೆ ಮಾಡಲಾಗುತ್ತಿದೆ” ಎಂದು ತಿಹಾರ್ ಜೈಲಿನ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ